ಬ್ರೇಕಿಂಗ್ ನ್ಯೂಸ್
15-02-21 02:50 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್ಐಆರ್ ದಾಖಲಾಗಿದೆ.
2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹರ್ಯಾಣದ ಹಿಸಾರ್ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್ಐಆರ್ ದಾಖಲಾಗಿದೆ.
This News Article is a Copy of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am