ಬ್ರೇಕಿಂಗ್ ನ್ಯೂಸ್
15-02-21 03:06 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಎರಡನೇ ಪಂದ್ಯದ ಮೊದಲ ದಿನದಿಂದಲೇ ಸಾಕಷ್ಟು ತಿರುವು ಪಡೆದುಕೊಂಡಿತ್ತು. ಇದರ ಲಾಭವನ್ನು ಸ್ಪಿನ್ನರ್ಗಳು ಪಡೆದುಕೊಂಡಿದ್ದು ಬ್ಯಾಟ್ಸ್ಮನ್ಗಳ ಮೇಲೆ ಸವಾರಿ ಮಾಡಿದ್ದಾರೆ. ಆದರೆ ಆರಂಭದ ದಿನದಿಂದಲೇ ಪಿಚ್ ವರ್ತಿಸುತ್ತಿರುವ ರೀತಿಯ ಬಗ್ಗೆ ಕೆಲ ಮಾಜಿ ಆಟಗಾರರು ಆಕ್ಷೇಪವನ್ನು ವ್ಯಕ್ತಪಡಿಸಿದರು. ಅದರಲ್ಲೂ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಇದೊಂದು ಕೆಟ್ಟ ಪಿಚ್, ಐದು ದಿನಗಳ ಕಾಲ ಆಡುವ ಸ್ಪರ್ಧಾತ್ಮಕ ಪಿಚ್ ಅಲ್ಲ ಎಂದಿದ್ದರು.
ಈ ರೀತಿಯ ಪ್ರತಿಕ್ರಿಯೆಗಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದು ತಿರುಗೇಟಿ ನೀಡಿದ್ದಾರೆ. ಇಂಗ್ಲೆಂಡ್ನಲ್ಲಿ ಪಂದ್ಯದ ಐದು ದಿನವೂ ಸೀಮಿಂಗ್ ಟ್ರ್ಯಾಕ್ ಇದ್ದಾಗ ಯಾರೂ ಮಾತನಾಡಲ್ಲ, ಆದರೆ ಭಾರತದಲ್ಲಿ ಸ್ಪಿನ್ ಆಗುತ್ತಿದ್ದಂತೆಯೇ ಮಾತನಾಡಲು ಮುಂದಾಗುತ್ತಾರೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಚೆನ್ನೈ ಪಿಚ್ನಲ್ಲಿ ಟೀಮ್ ಇಂಡಿಯಾ ಆಟಗಾರರು ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ ಗವಾಸ್ಕರ್ ಮಾತನಾಡಿದರು. "ನಿನ್ನೆ ರೋಹಿತ್ ಶರ್ಮಾ ಬ್ಯಾಟಿಂಗ್ ನಡೆಸಿ 150 ರನ್ಗಳನ್ನು ಕಲೆಹಾಕಿರುವುದನ್ನು ನಾವು ಗಮನಿಸಿದ್ದೇವೆ. ಚೆಂಡನ್ನು ಅದ್ಭುತವಾಗಿ ಅವರು ಎದುರಿಸಿದ್ದರು. ಇದು ಈ ಪಿಚ್ನ್ನು ಸಮರ್ಥನೆ ಮಾಡಿಕೊಂಡಂತಾಗಿದೆ" ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. "ಕೆಲವರು ಈ ಬಗ್ಗೆ ಮಾತನಾಡುತ್ತಾರೆ. ಆದರೆ ಇಂಗ್ಲೆಂಡ್ನಲ್ಲಿ ನೀವು ಸೀಮಿಂಗ್ ಪಿಚ್ಗಳನ್ನು ಹೊಂದಿರುತ್ತೀರಿ. ಆಸ್ಟ್ರೇಲಿಯಾ ಈ ಸೀಮಿಂಗ್ ಪಿಚ್ನ್ಲಲಿ 46 ರನ್ಗಳಿಗೆ ಆಲೌಟ್ ಆಗಿದೆ. ಪಂದ್ಯದ ಐದು ದಿನವೂ ಸೀಮರ್ಗಳಿಗೆ ಪೂರಕವಾಗಿರುತ್ತದೆ. ಆಬಗ್ಗೆ ಯಾರೂ ಮಾತನಾಡಲಾರರು. ಇದು ಯಾವಾಗಲೂ ಭಾರತೀಯ ಪಿಚ್ಗಳ ಬಗ್ಗೆಯೇ ಮಾತು. ಚೆಮಡು ತಿರುವು ಪಡೆಯುತ್ತಿದ್ದಂತೆಯೇ ಅವರಿಗೆ ಸಮಸ್ಯೆಗಳು ಆರಂಭವಾಗುತ್ತವೆ" ಎಂದು ಟೀಕಿಸಿದ್ದಾರೆ ಸುನಿಲ್ ಗವಾಸ್ಕರ್.
"ಇದು ಒಂದು ಅಥವಾ ಇಬ್ಬರು ಭಾರತವನ್ನು ಇಷ್ಟ ಪಡದವರು ಆಡುವ ಮಾತುಗಳು. ಇದನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯಗಳು ನಡೆಯುವಾಗ ಪ್ರತಿ ಬಾರಿಯೂ ಮಾಡುತ್ತಾರೆ. ನಾವು ಅದನ್ನು ನಿರ್ಲಕ್ಷಿಸಬೇಕು ಯಾಕೆಂದರೆ ಅವರು ಎರಡು ರೀತಿಯ ಮಾನದಂಡಗಳನ್ನು ಹೊಂದಿದವರು" ಎಂದು ಸುನಿಲ್ ಗವಾಸ್ಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
This News Article is a Copy of MYKHEL
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm