ಬ್ರೇಕಿಂಗ್ ನ್ಯೂಸ್
16-02-21 11:13 am Source: MYKHEL Madhukara Shetty ಕ್ರೀಡೆ
ಕಿಂಗ್ಸ್ ಇಲೆವ್ ಪಂಜಾಬ್ ತಂಡ ತನ್ನ ಹೆಸರನ್ನು ಬದಲಾಯಿಸಿಕೊಂಡು ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದೆ. ಕಳೆದ 13 ಆವೃತ್ತಿಗಳಲ್ಲಿ ಒಂದು ಬಾರಿಯೂ ಪ್ರಶಸ್ತಿ ಗೆಲ್ಲಲು ವಿಫಲವಾಗಿರುವ ಈ ಫ್ರಾಂಚೈಸಿ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ತನ್ನ ಹೆಸರನ್ನು ಬದಲಾಯಿಸಿಕೊಂಡು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಹಿಂದೆಯೂ ಐಪಿಎಲ್ನಲ್ಲಿ ಫ್ರಾಂಚೈಸಿಗಳು ತಮ್ಮ ತಂಡದ ಹೆಸರು ಬದಲಾಯಿಸಿದ ಉದಾಹರಣೆಗಳು ಇದೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಇದೇ ರೀತಿಯಲ್ಲಿ ಹೆಸರನ್ನು ಬದಲಾಯಿಸಿಕೊಂಡು ಕಣಕ್ಕಿಳಿದಿತ್ತು. ಅದಕ್ಕೂ ಮುನ್ನ ಸದ್ಯ ಕಾರ್ಯನಿರ್ವಹಿಸದ ಪುಣೆ ಸೂಪರ್ಜೈಂಟ್ಸ್ ತಂಡ ಕೂಡ ತನ್ನ ಹೆಸರನ್ನು ಬದಲಾವಣೆ ಮಾಡಿಕೊಂಡಿತ್ತು.

ಕಿಂಗ್ಸ್ XI ಪಂಜಾಬ್ಗೆ ಹೊಸ ಹೆಸರು
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ "ಪಂಜಾಬ್ ಕಿಂಗ್ಸ್" ಎಂದು ತನ್ನ ಹೆಸರನ್ನು ಬದಲಾವಣೆ ಮಾಡಿಕೊಳ್ಳಲಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ ಪಂಜಾಬ್ ಮೂಲದ ಫ್ರಾಂಚೈಸಿ ಸಾಕಷ್ಟು ಚರ್ಚೆಯ ನಂತರ ಹೊಸ ಹೆಸರನ್ನು ಆಯ್ಕೆ ಮಾಡಿಕೊಂಡಿದೆ. ಆದರೆ ಈ ಹೆಸರು ಬದಲಾವಣೆ ಮಾಡುವ ನಿರ್ಧಾರ ತಕ್ಷಣೆವೇ ತೆಗೆದುಕೊಂಡಿರಲಿಲ್ಲ. ಸಾಕಷ್ಟು ಸಮಯಗಳಿಂದ ತಂಡದ ಹೆಸರು ಬದಲಾವಣೆ ಮಾಡಬೇಕು ಎಂಬ ಚರ್ಚೆ ನಡೆಯುತ್ತಿತ್ತು. ಇದೀಗ ಮುಂದಿನ ಆವೃತ್ತಿಯಿಂದ ಬದಲಾದ ಹೆಸರಿನೊಂದಿಗೆ ಕಣಕ್ಕಿಳಿಯಲಿದೆ.

ಚೆನ್ನೈ ಟೆಸ್ಟ್ ನಂತರ ಮಿನಿ ಹರಾಜು
ಮುಂದಿನ ಬಾರಿಯ ಐಪಿಎಲ್ 2021ರ ಏಪ್ರಿಲ್ನಿಂದ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಫೆಬ್ರವರಿ 18ರಂದು ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ನಡೆಯಲಿದೆ. ಸದ್ಯ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡು ಹಾಗೂ ಮೂರನೇ ಪಂದ್ಯದ ಮಧ್ಯದ ಅವಧಿಯಲ್ಲಿ ಈ ಹರಾಜು ನಡೆಯಲಿದೆ.

ಕಳೆದ ಬಾರಿ ಎಡವಿದ ಪಂಜಾಬ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಕಳೆದ ಬಾರಿಯ ಆವೃತ್ತಿಯಲ್ಲಿ ಆರಂಭದಲ್ಲಿ ಸತತ ಸೋಲುಗಳಿಂದ ಕಂಗೆಟ್ಟು ಬಳಿಕ ಅದ್ಭುತ ರೀತಿಯಲ್ಲಿ ಕಮ್ಬ್ಯಾಕ್ ಮಾಡಿ ಹುಬ್ಬೇರುವಂತೆ ಮಾಡಿತ್ತು ಪಂಜಾಬ್. ಆದರೆ ಅಂತಿಮ ಹಂತದಲ್ಲಿ ಮತ್ತೆ ಎಡವಿ ಫ್ಲೇಆಫ್ಗೆ ಏರುವಲ್ಲಿ ವಿಫಲವಾಗಿತ್ತು.

ಒಂದೇ ಬಾರಿ ಫೈನಲ್ ಸಾಧನೆ
ಈ ಹಿಂದಿನ ಎಲ್ಲಾ ಆವೃತ್ತಿಗಳಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಉತ್ತಮ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಆದರೆ ಈವರೆಗೂ ಪ್ರಶಸ್ತಿ ಗೆಲ್ಲಲು ಅದು ವಿಫಲವಾಗಿದೆ. 2015ರಲ್ಲಿ ಒಂದು ಭಾರಿ ಫೈನಲ್ ಹಂತಕ್ಕೆ ಪ್ರವೇಶಿಸಿ ರನ್ನರ್ಅಪ್ಗೆ ತೃಪ್ತಿಪಟ್ಟುಕೊಂಡಿತ್ತು. ಕೇವಲ ಎರಡು ಬಾರಿ ಮಾತ್ರವೇ ಪ್ಲೇ ಆಫ್ಹಂತಕ್ಕೆ ಪ್ರವೇಶ ಪಡೆಯುವಲ್ಲಿ ತಂಡ ಯಶಸ್ವಿಯಾಗಿದೆ. ಈಗ ಹೊಸ ಹೆಸರು ಪಂಜಾಬ್ಗೆ ಅದೃಷ್ಠವನ್ನು ತರಲಿದೆಯಾ ಎಂಬುದ ಕುತೂಹಲ ಮೂಡಿಸಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am