ಬ್ರೇಕಿಂಗ್ ನ್ಯೂಸ್
19-02-21 05:08 pm Source: MYKHEL Mahesh Malnad ಕ್ರೀಡೆ
ಯುವ ಪ್ರತಿಭಾವಂತರಿಗೆ ವೇದಿಕೆ ಒದಗಿಸುವ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದೆ. ಫೆ.18ರಂದು ಚೆನ್ನೈನಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಗಮನ ಸೆಳೆದ ಖರೀದಿ ಪೈಕಿ ಚೇತನ್ ಸಕಾರಿಯಾ ಅವರಿಗಾಗಿ ಮಾಡಿದ ಬಿಡ್ಡಿಂಗ್ ಕೂಡಾ ಒಂದು. ರಾಜಸ್ಥಾನ ರಾಯಲ್ಸ್ ತಂಡ ಸೇರಿದ ಚೇತನ್ ಸಕಾರಿಯಾ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ.
ಒಂದು ಕಾಲದಲ್ಲಿ ಚೇತನ್ ಸಕಾರಿಯಾ ಅವರ ತಂದೆ ಟೆಂಪೋ ಚಾಲಕರಾಗಿದ್ದರು. ತಮ್ಮ ಮಗ ಕ್ರಿಕೆಟ್ ಸ್ಟಾರ್ ಆಗಬೇಕು ಎಂದು ಕನಸು ಕಂಡಿದ್ದರು. 22 ವರ್ಷ ವಯಸ್ಸಿನ ಚೇತನ್ ಭರ್ಜರಿ 1.2 ಕೋಟಿ ರು ಗಳಿಗೆ ಮಾರಾಟವಾಗಿದ್ದಾರೆ. ಸೌರಾಷ್ಟ್ರ ಮೂಲದ ಎಡಗೈ ವೇಗದ ಬೌಲರ್ ಗೆ ಭರ್ಜರಿ ಮೊತ್ತ ನೀಡಿ ರಾಯಲ್ಸ್ ಖರೀದಿಸಿದೆ. ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡು ಅಗಲಿದ ತಮ್ಮನ ಅಗಲಿಕೆಯ ನೋವಿನಲ್ಲಿದ್ದ ಚೇತನ್ ಹಾಗೂ ಕುಟುಂಬಸ್ಥರಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಂತರ ಸಂತಸ ಮೂಡಿದೆ.
ತಮ್ಮನ ಆಸೆಯಂತೆ ಐಪಿಎಲ್ ತಂಡ ಸೇರಿದ ಖುಷಿ ಚೇತನ್ ರಲ್ಲಿ ಮೂಡಿದೆ. ಮನೆಯಲ್ಲಿ ಟಿವಿ ಕೂಡಾ ಇರದ ಬಡತನ ಪರಿಸ್ಥಿತಿಯಲ್ಲಿ ಚೇತನ್ ಅವರ ತಂದೆ ಗುಜರಾತಿನ ವರ್ತೇಜ್ ಎಂಬಲ್ಲಿ ಟೆಂಪೋ ಚಾಲನೆ ಮಾಡಿ ದುಡಿದು ಸಂಸಾರ ನಡೆಸಿದ್ದಾರೆ. ಸ್ನೇಹಿತರ ಮನೆಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಾ ಬೆಳೆದ ಚೇತನ್, ಜನವರಿಯಲ್ಲಿ ನನ್ನ ತಮ್ಮ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ನಾನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿದ್ದೆ. ನನಗೆ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಮುಟ್ಟಿಸಲೇ ಇಲ್ಲ, ರಾಹುಲ್ (ತಮ್ಮ) ಬಗ್ಗೆ ಕೇಳಿದಾಗ, ಹೊರಗಡೆ ಹೋಗಿದ್ದಾನೆ ಎಂದಷ್ಟೇ ಹೇಳುತ್ತಿದ್ದರು. ಅವನ ಅಗಲಿಕೆ ನಷ್ಟ ತುಂಬಲು ಸಾಧ್ಯವಿಲ್ಲ, ಇಂದು ಐಪಿಎಲ್ ತಂಡಕ್ಕೆ ಆಯ್ಕೆಯಾಗಿದ್ದು ತಿಳಿದಿದ್ದರೆ ಅವನು ತುಂಬಾ ಸಂತಸ ಪಡುತ್ತಿದ್ದ ಎಂದು ಚೇತನ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
ಆರ್ ಸಿಬಿ ನೆಟ್ ಬೌಲರ್
ಯುಎಇಯಲ್ಲಿ ನಡೆದ ಕಳೆದ ಐಪಿಎಲ್ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೆಟ್ ಬೌಲರ್ ಆಗಿ ಚೇತನ್ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸೈಮನ್ ಕಾಟಿಚ್ ಹಾಗೂ ಮೈಕ್ ಹೆಸ್ಸನ್ ಮಾರ್ಗದರ್ಶನವನ್ನು ಸ್ಮರಿಸಿದ್ದಾರೆ. ಮೊಟ್ಟಮೊದಲು ರಾಜ್ ಕೋಟ್ ಶಿಫ್ಟ್ ಆಗಿ ಸ್ವಂತ ಮನೆ ಖರೀದಿಸುವುದು ನನ್ನ ಮೊದಲ ಆದ್ಯತೆ ಎಂದಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am