ಬ್ರೇಕಿಂಗ್ ನ್ಯೂಸ್
20-02-21 10:27 am Headline Karnataka News Network ಕ್ರೀಡೆ
ತಿರುವನಂತಪುರಂ, ಫೆ.20: 'ಮೆಟ್ರೋ ಮ್ಯಾನ್' ಖ್ಯಾತಿಯ ಇ. ಶ್ರೀಧರನ್ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಕೇರಳದಿಂದ ಮತ್ತೊಬ್ಬ ಸೆಲೆಬ್ರಿಟಿ ಕೂಡ ಕೇಸರಿ ಪಾಳೆಯದತ್ತ ಮುಖ ಮಾಡಿದ್ದಾರೆ. 'ಪಯ್ಯೋಲಿ ಎಕ್ಸ್ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ. ಉಷಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಜವಾಬ್ದಾರಿಯನ್ನು ಕೇರಳ ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಅವರಿಗೆ ವಹಿಸಲಾಗಿದೆ.
ಕೇರಳದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಲು ಬಿಜೆಪಿ 'ವಿಜಯ ಯಾತ್ರೆ' ಆಯೋಜಿಸುತ್ತಿದ್ದು, ಈ ಸಂದರ್ಭದಲ್ಲಿ ಪಿಟಿ ಉಷಾ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶಿಗರು ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಭಾರತ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳಲ್ಲಿ ಪಿಟಿ ಉಷಾ ಕೂಡ ಸೇರಿದ್ದರು. ಅದೇ ವೇಳೆ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆಯ ಚರ್ಚೆ ಶುರುವಾಗಿತ್ತು. ಈ ಹಿಂದೆಯೂ ಪಿಟಿ ಉಷಾ ಅವರ ಬಿಜೆಪಿ ಸೇರ್ಪಡೆ ಚರ್ಚೆ ನಡೆದಿತ್ತು. ಆದರೆ ಅದನ್ನು ಅವರು ನಿರಾಕರಿಸಿದ್ದರು.

ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯು ಪಕ್ಷಕ್ಕೆ ಸೆಲೆಬ್ರಿಟಿಗಳನ್ನು ಸೆಳೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ. ನಟ ಉನ್ನಿ ಮುಕುಂದನ್ ಜತೆ ಸುರೇಂದ್ರ ಅವರು ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದರು. ಆದರೆ ಉನ್ನಿ ಮುಕುಂದನ್ ಪ್ರಸ್ತುತ ಸಿನಿಮಾಗಳ ಮೇಲೆ ಗಮನ ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸ್ಪರ್ಧೆಯ ಬಗ್ಗೆ ಪರಿಗಣಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ನಟಿ ಅನುಶ್ರೀ ಜತೆ ಕೂಡ ಬಿಜೆಪಿ ಸಮಾಲೋಚನೆ ನಡೆಸಿದ್ದು, ಸಕ್ರಿಯ ರಾಜಕಾರಣದ ಬಗ್ಗೆ ತಮಗೆ ಆಸಕ್ತಿ ಇಲ್ಲ ಎಂದು ಅವರು ಹೇಳಿದ್ದಾರೆ. ಕಿರುತೆರೆ ನಟಿ ನಿಶಾ ಸಾರಂಗ್, ನಟಿ ಮಲ್ಲಿಕಾ ಸುಕುಮಾರನ್ ಜತೆ ಕೂಡ ಮಾತುಕತೆ ನಡೆಯುತ್ತಿದೆ. ಮಲ್ಲಿಕಾ ಅವರು ಸ್ಪರ್ಧೆಗೆ ಇಳಿಯಲು ನಿರಾಕರಿಸಿದ್ದಾರೆ. ಆದರೆ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm