ಬ್ರೇಕಿಂಗ್ ನ್ಯೂಸ್
26-02-21 11:03 am Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಚೆನ್ನಾಗೇ ಇತ್ತು ಆದರೆ, ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ಗುಣಮಟ್ಟ ಚೆನ್ನಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಮುಕ್ತಾಯದ ಬಳಿಕ ಕೊಹ್ಲಿ ಈ ಹೇಳಿಕೆ ನೀಡಿದ್ದಾರೆ.
ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟಿಂಗ್ ಪ್ರದರ್ಶನ ಚೆನ್ನಾಗಿರಲಿಲ್ಲ. ನಾಲ್ಕೂ ಇನ್ನಿಂಗ್ಸ್ಗಳಲ್ಲಿ ಒಬ್ಬರೂ ಕೂಡ ಗಮನಾರ್ಹ ಬ್ಯಾಟಿಂಗ್ ತೋರಿರಲಿಲ್ಲ. ಪಿಚ್ ಬಹುತೇಕ ಬೌಲರ್ಗಳಿಗೆ ಅದರಲ್ಲೂ ಸ್ಪಿನ್ಗೆ ಅನುಕೂಲಕರ ಪಿಚ್ನಂತಿತ್ತು. ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಸೋಲನುಭವಿಸಿತ್ತು.
ಭಾರತ-ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಕ್ರೀಸ್ನಲ್ಲಿ ನಿಲ್ಲಲು ಪರದಾಡುತ್ತಿದ್ದನ್ನು ಕಂಡು ಅನೇಕ ಕ್ರಿಕೆಟ್ ಪರಿಣಿತರು ಪಿಚ್ ಬಗ್ಗೆ ಅಸಮಾಧಾನ ತೋರಿಕೊಂಡಿದ್ದರು. ಟೆಸ್ಟ್ ಪಂದ್ಯಕ್ಕೆ ಮೊಟೆರಾ ಪಿಚ್ ಯೋಗ್ಯವಲ್ಲ ಎಂದು ಹೇಳಿಕೊಂಡಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ಕೂಡ ಇಂಥದ್ದೇ ಹೇಳಿಕೆ ನೀಡಿದ್ದರು. ಆದರೆ ಕೊಹ್ಲಿ ಇದಕ್ಕೆ ವಿರುದ್ಧ ಹೇಳಿಕೆ ನೀಡಿದ್ದಾರೆ.
'ಪ್ರಾಮಾಣಿಕವಾಗಿ ಹೇಳೋದಾದ್ರೆ, ಗುಣಮಟ್ಟದ ಮಟ್ಟಕ್ಕೆ ಬ್ಯಾಟಿಂಗ್ ಗುಣಮಟ್ಟ ಇರಲಿಲ್ಲ. ನಾವು 100 ರನ್ ಹೊತ್ತಿಗೆ 3 ವಿಕೆಟ್ ಕಳೆದುಕೊಂಡಿದ್ದೆವು. 150ಕ್ಕೂ ಕಡಿಮೆ ರನ್ ವೇಳೆಗೆ ಆಲ್ ಔಟ್ ಆಗಿದ್ದೆವು. ಚೆಂಡು ತಿರುಗುತ್ತಿತ್ತು ಅನ್ನೋದು ಬಿಟ್ಟರೆ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಲು ಪಿಚ್ ಚೆನ್ನಾಗಿತ್ತು,' ಎಂದು ಕೊಹ್ಲಿ ಹೇಳಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm