ಬ್ರೇಕಿಂಗ್ ನ್ಯೂಸ್
27-02-21 10:40 am Source: MYKHEL ಕ್ರೀಡೆ
ಭಾರತದ ಆಥ್ಲೆಟಿಕ್ ತಾರೆ ಹಿಮಾದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಿದೆ. ಈ ತಿಂಗಳ ಆರಂಭದಲ್ಲಿ ಹಿಮಾದಾಸ್ ಅವರನ್ನು DSP ಆಗಿ ನೇಮಕ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಹೀಗಾಗಿ ಇಂದು ಹಿಮಾದಾಸ್ಗೆ ಅಧಿಕೃತವಾಗಿ ನೇಮಕಗೊಳಿಸಿದೆ.
ಅಸ್ಸಾಂ ಪೊಲೀಸ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಅಸ್ಸಾಂ ಪೊಲೀಸ್ನ ಡಿಜಿಪಿ ಆಗಿರುವ ಭಾಸ್ಕರ್ ಜ್ಯೋತಿ ಮಹಾಂತ ಹೀಮಾದಾಸ್ ಅವರನ್ನು ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯ ಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ ಹಾಜರಿದ್ದರು.
ಈ ಬಗ್ಗೆ ಅಸ್ಸಾಂ ಸಿಎಂ ಟ್ವೀಟ್ ಮಾಡಿದ್ದು, "ಇದು ರಾಜ್ಯಕ್ಕೆ ಮತ್ತು ಹಿಮಾದಾಸ್ ಅವರಿಗೆ ಹೆಮ್ಮೆಯ ದಿನವಾಗಿದೆ. ಹಿಮಾ ದಾಸ್ ಅವರ ನೇಮಕವು ದೇಶದ ಯುವಜನರಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ" ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಕ್ರೀಡಾ ಸಚಿವರೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ "ಯುವ ಪೀಳಿಗೆಗೆ ಕ್ರೀಡೆಗಳನ್ನು ಭರವಸೆಯ ವೃತ್ತಿಜೀವನವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಮಗ್ರ ಕ್ರೀಡಾ ನೀತಿಯನ್ನು ಅಳವಡಿಸಿಕೊಂಡಿದೆ. ರಾಜ್ಯ ಸರ್ಕಾರವು ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಅಸ್ಸಾಂ ಪೊಲೀಸರಲ್ಲಿ ಡಿಎಸ್ಪಿಯಾಗಿ ನೇಮಕ ಮಾಡಿದೆ, ಏಕೆಂದರೆ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ರಂಗದಲ್ಲಿ ತಮ್ಮ ಸಾಧನೆಗಳಿಂದ ರಾಜ್ಯವನ್ನು ಹೆಮ್ಮೆಪಡುತ್ತಾರೆ" ಎಂದು ಅವರು ಹೇಳಿದರು.
ಇನ್ನು ಈ ಬಗ್ಗೆ ಹಿಮಾದಾಸ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಜೀವನದ ಅತ್ಯಂತ ದೊಡ್ಡ ಕನಸೊಂದು ಇಂದು ನನಸಾಗೊರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಅಸ್ಸಾಂ ಪೋಲೀಸ್ನಲ್ಲಿ ಡಿಎಸ್ಪಿ ಆಗಿರಲು ನಾನು ಹೆಮ್ಮೆ ಪಡುತ್ತೇನೆ. ಈ ಗೌರವವನ್ನು ನಾನು ಹೆಮ್ಮೆಯಿಂದಲೇ ಸ್ವೀಕರಿಸುತ್ತೇನೆ" ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
This News Article is a Copy of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm