ಬ್ರೇಕಿಂಗ್ ನ್ಯೂಸ್
27-02-21 10:40 am Source: MYKHEL ಕ್ರೀಡೆ
ಭಾರತದ ಆಥ್ಲೆಟಿಕ್ ತಾರೆ ಹಿಮಾದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಿದೆ. ಈ ತಿಂಗಳ ಆರಂಭದಲ್ಲಿ ಹಿಮಾದಾಸ್ ಅವರನ್ನು DSP ಆಗಿ ನೇಮಕ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಹೀಗಾಗಿ ಇಂದು ಹಿಮಾದಾಸ್ಗೆ ಅಧಿಕೃತವಾಗಿ ನೇಮಕಗೊಳಿಸಿದೆ.
ಅಸ್ಸಾಂ ಪೊಲೀಸ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಅಸ್ಸಾಂ ಪೊಲೀಸ್ನ ಡಿಜಿಪಿ ಆಗಿರುವ ಭಾಸ್ಕರ್ ಜ್ಯೋತಿ ಮಹಾಂತ ಹೀಮಾದಾಸ್ ಅವರನ್ನು ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯ ಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ ಹಾಜರಿದ್ದರು.
ಈ ಬಗ್ಗೆ ಅಸ್ಸಾಂ ಸಿಎಂ ಟ್ವೀಟ್ ಮಾಡಿದ್ದು, "ಇದು ರಾಜ್ಯಕ್ಕೆ ಮತ್ತು ಹಿಮಾದಾಸ್ ಅವರಿಗೆ ಹೆಮ್ಮೆಯ ದಿನವಾಗಿದೆ. ಹಿಮಾ ದಾಸ್ ಅವರ ನೇಮಕವು ದೇಶದ ಯುವಜನರಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ" ಎಂದು ಹೇಳಿದ್ದಾರೆ.
ಮಾಜಿ ಕೇಂದ್ರ ಕ್ರೀಡಾ ಸಚಿವರೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ "ಯುವ ಪೀಳಿಗೆಗೆ ಕ್ರೀಡೆಗಳನ್ನು ಭರವಸೆಯ ವೃತ್ತಿಜೀವನವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಮಗ್ರ ಕ್ರೀಡಾ ನೀತಿಯನ್ನು ಅಳವಡಿಸಿಕೊಂಡಿದೆ. ರಾಜ್ಯ ಸರ್ಕಾರವು ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಅಸ್ಸಾಂ ಪೊಲೀಸರಲ್ಲಿ ಡಿಎಸ್ಪಿಯಾಗಿ ನೇಮಕ ಮಾಡಿದೆ, ಏಕೆಂದರೆ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ರಂಗದಲ್ಲಿ ತಮ್ಮ ಸಾಧನೆಗಳಿಂದ ರಾಜ್ಯವನ್ನು ಹೆಮ್ಮೆಪಡುತ್ತಾರೆ" ಎಂದು ಅವರು ಹೇಳಿದರು.
ಇನ್ನು ಈ ಬಗ್ಗೆ ಹಿಮಾದಾಸ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಜೀವನದ ಅತ್ಯಂತ ದೊಡ್ಡ ಕನಸೊಂದು ಇಂದು ನನಸಾಗೊರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಅಸ್ಸಾಂ ಪೋಲೀಸ್ನಲ್ಲಿ ಡಿಎಸ್ಪಿ ಆಗಿರಲು ನಾನು ಹೆಮ್ಮೆ ಪಡುತ್ತೇನೆ. ಈ ಗೌರವವನ್ನು ನಾನು ಹೆಮ್ಮೆಯಿಂದಲೇ ಸ್ವೀಕರಿಸುತ್ತೇನೆ" ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
This News Article is a Copy of MYKHEL
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm