ಬ್ರೇಕಿಂಗ್ ನ್ಯೂಸ್
01-03-21 10:42 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದೆ. ಮಾರ್ಚ್ ನಾಲ್ಕರಿಂದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸಿದ್ಧತೆಯನ್ನು ನಡೆಸುತ್ತಿದ್ದಾರೆ.
ಭಾನುವಾರ ವಿರಾಟ್ ಕೊಹ್ಲಿ ನೇತೃತ್ವ ಟೀಮ್ ಇಂಡಿಯಾ ನಾಲ್ಕನೇ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸವನ್ನು ನಡೆಸಿದೆ. ನೆಟ್ನಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದು ಬೆವರಿಳಿಸಿ ಅಭ್ಯಾಸವನ್ನು ಮಾಡಿದ್ದಾರೆ. ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸದ್ಯ 2-1 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ಬಿಸಿಸಿಐನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್ ಅಭ್ಯಾಸವನ್ನು ನಡೆಸುತ್ತಿದ್ದರೆ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ತೊಡಗಿಸಿಕೊಂಡಿದ್ದರು. ಮತ್ತೊಂದೆಡೆ ಅಜಿಂಕ್ಯ ರಹಾನೆ ಫೀಲ್ಡಿಂಗ್ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಫೋಟೋವನ್ನು ಹಂಚಿಕೊಳ್ಳಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಸರಣಿ ಕೇವಲ ಎರಡೇ ದಿನದಲ್ಲಿ ಅಂತ್ಯವಾಗಿದ್ದು ಭಾರತ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಪಿನ್ನರ್ಗಳಿಗೆ ಸಹಕಾರಿಯಾಗಿದ್ದ ಪಿಚ್ನಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ಗಳು ಮಿಂಚುವಲ್ಲಿ ಸಂಪೂರ್ಣ ವಿಫಲವಾಗಿದ್ದರು.
ಮತ್ತೊಂದೆಡೆ ಐಸಿಸಿ ಪ್ರಕಟಿಸಿದ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಹಲವು ಆಟಗಾರರು ಉತ್ತಮ ಸಾಧನೆ ತೋರಿದ್ದಾರೆ. ಆರ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತೊ ರೋಹಿತ್ ಶರ್ಮಾ ಮಹತ್ವದ ಏರಿಕೆ ಕಾಣುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟಿಂಗ್ನಲ್ಲಿ ಟೆಸ್ಟ್ ಕ್ರಿಕೆಟ್ನ ತಮ್ಮ ಸಾರ್ವಕಾಲಿಕ ಉತ್ತಮ ಶ್ರೇಯಾಂಕ 8ನೇ ಸ್ಥಾನಕ್ಕೇರಿದ್ದಾರೆ ರೋಹಿತ್ ಶರ್ಮಾ. ಮತ್ತೊಂದೆಡೆ ಆರ್ ಅಶ್ವಿನ್ ಬೌಲರ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಅಕ್ಷರ್ ಪಟೇಲ್ 30 ಸ್ಥಾನಗಳ ಏರಿಕೆ ಕಂಡಿದ್ದು ಈಗ 38ನೇ ಶ್ರೇಯಾಂಕದಲ್ಲಿದ್ದಾರೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am