ಬ್ರೇಕಿಂಗ್ ನ್ಯೂಸ್
01-03-21 10:54 am Source: MYKHEL ಕ್ರೀಡೆ
ಗೋವಾ, ಫೆಬ್ರವರಿ 28: ಗೋವಾಕ್ಕೆ ಗೋಲು ಗಳಿಸಬೇಕಾಗಿರಲಿಲ್ಲ. ಹೈದರಾಬಾದ್ ಗೆ ಸೆಮಿ ಫೈನಲ್ ತಲುಪಲು ಗೋಲು ಗಳಿಸಬೇಕಾಗಿತ್ತು. ಆದರೆ ಹೈದರಾಬಾದ್ ನ ಆಟ ನಡೆಯಲಿಲ್ಲ. ಗೋವಾ ಗೋಲು ಗಳಿಸದೆ ಸೆಮಿಫೈನಲ್ ತಲುಪಿದೆ. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಇದುವರೆಗೂ ದಿಟ್ಟ ಹೋರಾಟವನ್ನು ನೀಡಿ ಸೆಮಿಫೈನಲ್ ತಲಪುವ ಫೇವರಿಟ್ ತಂಡವೆನಿಸಿದ್ದ ಹೈದರಾಬಾದ್ ಎಫ್ ಸಿ ಕೊನೆಯ ಪಂದ್ಯದಲ್ಲಿ ಜಯ ಕಾಣುವಲ್ಲಿ ವಿಫಲವಾಗಿದೆ.
ಪರಿಣಾಮ ಒಂದು ಅಂಕದ ಅಗತ್ಯದಲ್ಲಿದ್ದ ಗೋವಾ ಎಫ್ ಸಿ ಹೀರೋ ಇಂಡಿಯನ್ ಸೂಪರ್ ಲೀಗ್ ನ ಪ್ಲೇ ಆಫ್ ತಲುಪಿದೆ. ಇದರೊಂದಿಗೆ ಎಟಿಕೆ ಮೋಹನ್ ಬಾಗನ್, ಮುಂಬೈ ಸಿಟಿ ಎಫ್ ಸಿ, ನಾರ್ಥ್ ಈಸ್ಟ್ ಯುನೈಟೆಡ್ ಮತ್ತು ಎಫ್ ಸಿ ಗೋವಾ ತಂಡಗಳು ಪ್ಲೇ ಆಫ್ ನಲ್ಲಿ ಪರಸ್ಪರ ಸೆಣಸಲಿವೆ. ಪಂದ್ಯ ಉತ್ತಮ ಪೈಪೋಟಿಯಿಂದಲೇ ಕೂಡಿತ್ತು. ಆದರೆ ಗೋಲಿಲ್ಲದ ಪ್ರಥಮಾರ್ಧವೆಂದೆ ಗೋವಾ ಬಹುತೇಕ ಪ್ಲೇ ಆಫ್ ತಲುಪಿದಂತೆ. ಇಲ್ಲಿ ಪಂದ್ಯ ಗೋಲಿಲ್ಲದೆ ಡ್ರಾಗೊಂಡರೆ ಗೋವಾ ಸುಲಭವಾಗಿ ಸೆಮಿಫೈನಲ್ ಗೆ ಲಗ್ಗೆ ಇಡಲಿದೆ, ಈ ಕಾರಣಕ್ಕಾಗಿಯೇ ಗೋವಾ ತನ್ನ ನೈಜ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿಲ್ಲ, ಬದಲಾಗಿ ತಾಳ್ಮೆಯ ಹೆಜ್ಜೆಯನ್ನಿಟ್ಟಿತ್ತು

ಗೋಲಿಲ್ಲದ ಪ್ರಥಮಾರ್ಧ
ಧೀರಜ್ ಸಿಂಗ್ ಹೈದರಾಬಾದ್ ನ ಅವಕಾಶಕ್ಕೆ ಆಸ್ಪದ ನೀಡದೆ ತಾನೊಬ್ಬ ಉದಯೋನ್ಮುಖ ಗೋಲ್ ಕೀಪರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಹೆಚ್ಚಿನ ಅವಕಾಶಗಳು ಇಲ್ಲದ ಕಾರಣ ಪ್ರಥಮಾರ್ಧ ಗೋಲಿಲ್ಲದೆ ಅಂತ್ಯಗೊಂಡಿತು. ಗೋವಾದ ಆಟಗಾರರ ಮೊಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಮುಂದಿನ 45 ನಿಮಿಷಗಳ ಆಟದಲ್ಲಿ ಹೈದರಾಬಾದ್ ಯಶಸ್ಸು ಕಂಡರೆ ಸೆಮಿಫೈನಲ್. ಇಲ್ಲವಾದಲ್ಲಿ ಮನೆಯ ಹಾದಿ.
ಪ್ಲೇ ಆಫ್ ಶೂಟೌಟ್ ಪ್ಲೇ ಆಫ್
ಗೆ ಮುನ್ನ ಮಿನಿ ಪ್ಲೇ ಆಫ್. ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಹೈದರಾಬಾದ್ ಹಾಗೂ ಗೋವಾ ಎಫ್ ಸಿ ತಂಡಗಳು ಮುಖಾಮುಖಿಯಾದವು. ಇದು ಈ ಬಾರಿಯ ಐಎಸ್ ಎಲ್ ನಲ್ಲೇ ಅತ್ಯಂತ ನಿರೀಕ್ಷೆಯ ಪಂದ್ಯ ಎಂದರೆ ತಪ್ಪಾಗಲಾರದು. 19 ಪಂದ್ಯಗಳ ನಂತರ ಉಳಿದಿರುವ ಈ 90 ನಿಮಿಷಗಳ ಪಂದ್ಯವು ಎರಡು ತಂಡಗಳ ಭವಿಷ್ಯವನ್ನು ತೀರ್ಮಾನಿಸಲಿದೆ. ಗೋವಾ ತಂಡಕ್ಕೆ ಕೇವಲ ಒಂದು ಅಂಕ ದೊರೆತರೂ ಅಂತಿಮ ನಾಲ್ಕರ ಹಂತ ತಲುಪಲಿದೆ. ಹೈದರಾಬಾದ್ ಗೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.ಗೋವಾ ತಂಡ 12 ಪಂದ್ಯಗಳಲ್ಲಿ ಸೋಲರಿಯದೆ ಬಂದಿದೆ. ಗೋಲು ಗಳಿಸುವುದು ಫೆರಾಂಡ್ ಪಡೆಗೆ ಕಷ್ಟವಲ್ಲ. ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ಗೋವಾ ಅಮೂಲ್ಯ ಅಂಕಗಳನ್ನು ಗಳಿಸಿತ್ತು.

ಕೊನೆಯ ಕ್ಷಣದವರೆಗೂ ಹೋರಾಟ
ಹೈದರಾಬಾದ್ ಕೂಡ ಕೊನೆಯ ಕ್ಷಣದವರೆಗೂ ಹೋರಾಟ ನೀಡುವ ತಂಡ. ಹಿಂದಿನ ಯಾವುದೇ ಯಶಸ್ಸು ಇಲ್ಲಿ ಪ್ರಯೋಜನಕ್ಕೆ ಬಾರದು, ಇಲ್ಲಿ ಗೆದ್ದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆ ಎಂಬುದು ಎರಡೂ ತಂಡಕ್ಕೆ ಗೊತ್ತಿರುವ ಅಂಶ. ಗೋವಾ ವಿರುದ್ಧ ಹೈದರಾಬಾದ್ ಗೆ ಜಯ ಹೊರತು ಬೇರೇನೂ ಬೇಕಾಗಿಲ್ಲ. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಜಯ ಬೇಕು. ನಾರ್ಥ್ ಈಸ್ಟ್ ಯನೈಟೆಡ್ ಎಫ್ ಸಿ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ತಮಗೆ ಲಾಭವಾಗಬಹುದು ಎಂದು ಕೋಚ್ ಮ್ಯಾನ್ವೆಲ್ ಮಾರ್ಕ್ವೆಜ್ ಊಹಿಸಿದ್ದರು, ಆದರೆ ಕೇರಳ ಬ್ಲಾಸ್ಟರ್ ಸೋಲು ಅನುಭವಿಸುವ ಮೂಲಕ ಈಗ ಹೈದರಾಬಾದ್ ಗೆಲ್ಲಲೇಬೇಕಾಗಿದೆ.
This News Article Is A Copy Of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm