ಬ್ರೇಕಿಂಗ್ ನ್ಯೂಸ್
02-03-21 11:06 am Source: MYKHEL ಕ್ರೀಡೆ
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.
ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.
ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm