ಬ್ರೇಕಿಂಗ್ ನ್ಯೂಸ್
02-03-21 12:22 pm Source: MYKHEL ಕ್ರೀಡೆ
ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಈಗ ಎರಡನೇ ಹಂತಕ್ಕೆ ಕಾಲಿಟ್ಟಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಬಳಿಕ ಈಗ 60 ವರ್ಷಕ್ಕಿಂತ ಅಧಿಕ ವಯಸ್ಸಿನ ನಾಗರೀಕರಿಗೆ ಲಸಿಕೆಯನ್ನು ನೀಲಾಗುತ್ತಿದೆ. ಈ ಹಂತದಲ್ಲಿ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವಿಟ್ಟರ್ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು ಸದ್ಯ ಗುಜರಾತ್ನ ಅಹ್ಮದಾಬಾದ್ನಲ್ಲಿ ಅಂತಿಮ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಅಂತಿಮ ಪಂದ್ಯಕ್ಕೂ ಮುನ್ನ ಕೋಚ್ ರವಿ ಶಾಸ್ತ್ರಿ ಅಹ್ಮದಾಬಾದ್ನ ಖಾಸಗಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಅಹ್ಮದಾಬಾದ್ನ ಅಪೊಲೋ ಆಸ್ಪತ್ರೆಯಲ್ಲಿ ರವಿ ಶಾಸ್ತ್ರಿ ಕೊರೊನಾ ಲಸಿಕೆಯ ಮೊದಲ ಡೋಸ್ಅನ್ನು ಹಾಕಿಸಿಕೊಂಡಿದ್ದಾರೆ. ಬಳಿಕ ಟ್ವಿಟ್ಟರ್ನಲ್ಲಿ ಭಾರತದ ವೈದ್ಯಕೀಯ ಸಿಬ್ಬಂಧಿಗಳ ಹಾಗೂ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ. ಸೋಮವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.
ಭಾರತದಲ್ಲಿ ಎರಡನೇ ಹಂತದಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಈಗ ಲಸಿಕೆಯನ್ನು ನೀಡಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳಾದರೆ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆಯನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್ಗೆ 250 ರೂಪಾಯಿಯನ್ನು ನಿಗದಿಪಡಿಲಾಗಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್ನಲ್ಲಿ ನಿರ್ಮಾಣವಾಗಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಾರ್ಚ್ ನಾಲ್ಕರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ಈಗ 2-1 ಅಂತರದಿಂದ ಮುನ್ನಡೆಯನ್ನು ಪಡೆದುಕೊಂಡಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm