ಬ್ರೇಕಿಂಗ್ ನ್ಯೂಸ್
02-03-21 03:19 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಕ್ಷಣಗಣನೆ ಆರಂಭವಾಗಿದ್ದರೆ ಅತ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಹಾಗೂ ಅಭಿಮಾನಿಗಳು ಕೂಡ ಈ ಪಂದ್ಯವನ್ನು ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ನಷ್ಟೇ ಆಸ್ಟ್ರೇಲಿಯಾಗೂ ಮುಖ್ಯವಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೇರಲು ಭಾರತವನ್ನು ಇಂಗ್ಲೆಂಡ್ ತಂಡ ಮಣಿಸಬೇಕಿದೆ. ಹಾಗಿದ್ದರೆ ಮಾತ್ರ ಆಸ್ಟ್ರೇಲಿಯಾ ಈ ಪ್ರತಿಷ್ಟಿತ ಟೂರ್ನಿಯ ಫೈನಲ್ ಹಂತಕ್ಕೇರಲು ಸಫಲವಾಗಲಿದೆ. ಹೀಗಾಗಿ ಆಸ್ಟ್ರೇಲಿಯಾ ತನ್ನ ಬದ್ಧ ಎದುರಾಳಿಗೆ ಈ ಬಾರಿ ಗೆಲ್ಲುವುದಕ್ಕಾಗಿ ಪ್ರಾರ್ಥಿಸಬೇಕಿದೆ. ಇಂಗ್ಲೆಂಡ್ ಮೂರನೇ ಪಂದ್ಯವನ್ನು ಸೋಲುವ ಮೂಲಕ ಈ ಸ್ಪರ್ಧೆಯಿಂದ ಹೊರಬಿದ್ದಿತ್ತು.
"ಇಲ್ಲಿ ನಮ್ಮ ಸ್ವ ಹಿತಾಸಕ್ತಿ ಇದೆ. ಸುದೀರ್ಘ ಕಾಲದ ಬಳಿಕ ನಾವು ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಬೆಂಬಲಿಸುತ್ತಿದ್ದೇವೆ" ಎಂದು ಆಸ್ಟ್ರೇಲಿಯಾ ತಂಡ ಹಂಗಾಮಿ ಕೋಚ್ ಆಂಡ್ರೋ ಮ್ಯಾಕ್ಡೊನಾಲ್ಡ್ ವೆಲ್ಲಿಂಗ್ಟನ್ನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.
"ಅವರು ತಮ್ಮ ಜವಾಬ್ಧಾರಿಯನ್ನು ನೆರವೇರಿಸಲಿದ್ದಾರೆ ಎಂಬ ಭರವಸೆಯನ್ನು ಹೊಂದಿದ್ದೇವೆ. ಅದು ತುಂಬಾ ಕಠಿಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಅವರು ಆಡಿದ ಕೆಲವು ಮೇಲ್ಮೈಗಳು ಸ್ಪಿನ್ ಬೌಲಿಂಗ್ಗೆ ಅನುಕೂಲಕರವಾಗಿವೆ ಮತ್ತು ಬಹುಶಃ ಭಾರತದ ಸ್ಪಿನ್ ಆಡುವ ಸಾಮರ್ಥ್ಯ ಅತ್ಯುತ್ತಮವಾಗಿದೆ" ಎಂದು ಮಾಕ್ಡೊನಾಲ್ಡ್ ಹೇಳಿದ್ದಾರೆ.
"ಅವರು(ಇಂಗ್ಲೆಂಡ್) ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಲಿ ಎಂದು ಹಾರೈಸುತ್ತೇವೆ. ಆದರೆ ನಮ್ಮ ಕೈಯ್ಯಲ್ಲಿ ಯಾವುದು ಕೂಡ ಇಲ್ಲ. ಆದರೆ ನಾವು ಈ ಪಂದ್ಯವನ್ನು ಬಹಳ ಕುತೂಹಲದಿಂದ ನೋಡುತ್ತೇವೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಹಂಗಾಮಿ ಕೋಚ್.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am