ಬ್ರೇಕಿಂಗ್ ನ್ಯೂಸ್
02-03-21 03:19 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಕ್ಷಣಗಣನೆ ಆರಂಭವಾಗಿದ್ದರೆ ಅತ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಹಾಗೂ ಅಭಿಮಾನಿಗಳು ಕೂಡ ಈ ಪಂದ್ಯವನ್ನು ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ನಷ್ಟೇ ಆಸ್ಟ್ರೇಲಿಯಾಗೂ ಮುಖ್ಯವಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೇರಲು ಭಾರತವನ್ನು ಇಂಗ್ಲೆಂಡ್ ತಂಡ ಮಣಿಸಬೇಕಿದೆ. ಹಾಗಿದ್ದರೆ ಮಾತ್ರ ಆಸ್ಟ್ರೇಲಿಯಾ ಈ ಪ್ರತಿಷ್ಟಿತ ಟೂರ್ನಿಯ ಫೈನಲ್ ಹಂತಕ್ಕೇರಲು ಸಫಲವಾಗಲಿದೆ. ಹೀಗಾಗಿ ಆಸ್ಟ್ರೇಲಿಯಾ ತನ್ನ ಬದ್ಧ ಎದುರಾಳಿಗೆ ಈ ಬಾರಿ ಗೆಲ್ಲುವುದಕ್ಕಾಗಿ ಪ್ರಾರ್ಥಿಸಬೇಕಿದೆ. ಇಂಗ್ಲೆಂಡ್ ಮೂರನೇ ಪಂದ್ಯವನ್ನು ಸೋಲುವ ಮೂಲಕ ಈ ಸ್ಪರ್ಧೆಯಿಂದ ಹೊರಬಿದ್ದಿತ್ತು.
"ಇಲ್ಲಿ ನಮ್ಮ ಸ್ವ ಹಿತಾಸಕ್ತಿ ಇದೆ. ಸುದೀರ್ಘ ಕಾಲದ ಬಳಿಕ ನಾವು ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಬೆಂಬಲಿಸುತ್ತಿದ್ದೇವೆ" ಎಂದು ಆಸ್ಟ್ರೇಲಿಯಾ ತಂಡ ಹಂಗಾಮಿ ಕೋಚ್ ಆಂಡ್ರೋ ಮ್ಯಾಕ್ಡೊನಾಲ್ಡ್ ವೆಲ್ಲಿಂಗ್ಟನ್ನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.
"ಅವರು ತಮ್ಮ ಜವಾಬ್ಧಾರಿಯನ್ನು ನೆರವೇರಿಸಲಿದ್ದಾರೆ ಎಂಬ ಭರವಸೆಯನ್ನು ಹೊಂದಿದ್ದೇವೆ. ಅದು ತುಂಬಾ ಕಠಿಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಅವರು ಆಡಿದ ಕೆಲವು ಮೇಲ್ಮೈಗಳು ಸ್ಪಿನ್ ಬೌಲಿಂಗ್ಗೆ ಅನುಕೂಲಕರವಾಗಿವೆ ಮತ್ತು ಬಹುಶಃ ಭಾರತದ ಸ್ಪಿನ್ ಆಡುವ ಸಾಮರ್ಥ್ಯ ಅತ್ಯುತ್ತಮವಾಗಿದೆ" ಎಂದು ಮಾಕ್ಡೊನಾಲ್ಡ್ ಹೇಳಿದ್ದಾರೆ.
"ಅವರು(ಇಂಗ್ಲೆಂಡ್) ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಲಿ ಎಂದು ಹಾರೈಸುತ್ತೇವೆ. ಆದರೆ ನಮ್ಮ ಕೈಯ್ಯಲ್ಲಿ ಯಾವುದು ಕೂಡ ಇಲ್ಲ. ಆದರೆ ನಾವು ಈ ಪಂದ್ಯವನ್ನು ಬಹಳ ಕುತೂಹಲದಿಂದ ನೋಡುತ್ತೇವೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಹಂಗಾಮಿ ಕೋಚ್.
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm