ಬ್ರೇಕಿಂಗ್ ನ್ಯೂಸ್
02-03-21 03:19 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯವನ್ನಾಡಲು ಕ್ಷಣಗಣನೆ ಆರಂಭವಾಗಿದ್ದರೆ ಅತ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಹಾಗೂ ಅಭಿಮಾನಿಗಳು ಕೂಡ ಈ ಪಂದ್ಯವನ್ನು ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಈ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ನಷ್ಟೇ ಆಸ್ಟ್ರೇಲಿಯಾಗೂ ಮುಖ್ಯವಾಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೇರಲು ಭಾರತವನ್ನು ಇಂಗ್ಲೆಂಡ್ ತಂಡ ಮಣಿಸಬೇಕಿದೆ. ಹಾಗಿದ್ದರೆ ಮಾತ್ರ ಆಸ್ಟ್ರೇಲಿಯಾ ಈ ಪ್ರತಿಷ್ಟಿತ ಟೂರ್ನಿಯ ಫೈನಲ್ ಹಂತಕ್ಕೇರಲು ಸಫಲವಾಗಲಿದೆ. ಹೀಗಾಗಿ ಆಸ್ಟ್ರೇಲಿಯಾ ತನ್ನ ಬದ್ಧ ಎದುರಾಳಿಗೆ ಈ ಬಾರಿ ಗೆಲ್ಲುವುದಕ್ಕಾಗಿ ಪ್ರಾರ್ಥಿಸಬೇಕಿದೆ. ಇಂಗ್ಲೆಂಡ್ ಮೂರನೇ ಪಂದ್ಯವನ್ನು ಸೋಲುವ ಮೂಲಕ ಈ ಸ್ಪರ್ಧೆಯಿಂದ ಹೊರಬಿದ್ದಿತ್ತು.
"ಇಲ್ಲಿ ನಮ್ಮ ಸ್ವ ಹಿತಾಸಕ್ತಿ ಇದೆ. ಸುದೀರ್ಘ ಕಾಲದ ಬಳಿಕ ನಾವು ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಬೆಂಬಲಿಸುತ್ತಿದ್ದೇವೆ" ಎಂದು ಆಸ್ಟ್ರೇಲಿಯಾ ತಂಡ ಹಂಗಾಮಿ ಕೋಚ್ ಆಂಡ್ರೋ ಮ್ಯಾಕ್ಡೊನಾಲ್ಡ್ ವೆಲ್ಲಿಂಗ್ಟನ್ನಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.
"ಅವರು ತಮ್ಮ ಜವಾಬ್ಧಾರಿಯನ್ನು ನೆರವೇರಿಸಲಿದ್ದಾರೆ ಎಂಬ ಭರವಸೆಯನ್ನು ಹೊಂದಿದ್ದೇವೆ. ಅದು ತುಂಬಾ ಕಠಿಣವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಅವರು ಆಡಿದ ಕೆಲವು ಮೇಲ್ಮೈಗಳು ಸ್ಪಿನ್ ಬೌಲಿಂಗ್ಗೆ ಅನುಕೂಲಕರವಾಗಿವೆ ಮತ್ತು ಬಹುಶಃ ಭಾರತದ ಸ್ಪಿನ್ ಆಡುವ ಸಾಮರ್ಥ್ಯ ಅತ್ಯುತ್ತಮವಾಗಿದೆ" ಎಂದು ಮಾಕ್ಡೊನಾಲ್ಡ್ ಹೇಳಿದ್ದಾರೆ.
"ಅವರು(ಇಂಗ್ಲೆಂಡ್) ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಲಿ ಎಂದು ಹಾರೈಸುತ್ತೇವೆ. ಆದರೆ ನಮ್ಮ ಕೈಯ್ಯಲ್ಲಿ ಯಾವುದು ಕೂಡ ಇಲ್ಲ. ಆದರೆ ನಾವು ಈ ಪಂದ್ಯವನ್ನು ಬಹಳ ಕುತೂಹಲದಿಂದ ನೋಡುತ್ತೇವೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಹಂಗಾಮಿ ಕೋಚ್.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am