ಬ್ರೇಕಿಂಗ್ ನ್ಯೂಸ್
02-03-21 09:45 pm Source: MYKHEL ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕದ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಇತಿಹಾಸದಲ್ಲೇ ಪಡಿಕ್ಕಲ್ ದಾಖಲೆಯ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಕರ್ನಾಟಕ ತಂಡ ಈವರೆಗೆ ಒಟ್ಟು ಐದು ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲೂ ಪಡಿಕ್ಕಲ್ ಉತ್ತಮ ಬ್ಯಾಟಿಂಗ್ನೊಂದಿಗೆ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.
ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಗ್ರೂಪ್ 'ಸಿ'ಯಲ್ಲಿರುವ ಕರ್ನಾಟಕ, ಈವರೆಗೆ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಇತ್ತ ದೇವದತ್ ಪಡಿಕ್ಕಲ್ ಅತೀ ಹೆಚ್ಚು ರನ್ ಸರದಾರರ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ.

5 ಪಂದ್ಯಗಳಲ್ಲಿ ಪಡಿಕ್ಕಲ್ ಸ್ಕೋರ್
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ದೇವದತ್ ಪಡಿಕ್ಕಲ್ ಕಳೆದ ಐದು ಪಂದ್ಯಗಳಲ್ಲೂ 50+ ರನ್ ಗಳಿಸಿದ್ದಾರೆ ಅನ್ನೋದು ವಿಶೇಷ. ಹಿಂದಿನ 5 ಇನ್ನಿಂಗ್ಸ್ಗಳಲ್ಲಿ ಪಡಿಕ್ಕಲ್ ಕ್ರಮವಾಗಿ 52, 97, 152, 126, 145 ರನ್ ಗಳಿಸಿದ್ದಾರೆ.

ಅತೀ ಹೆಚ್ಚು ರನ್ ಪಟ್ಟಿಯಲ್ಲಿ ಅಗ್ರ ಸ್ಥಾನ
ವಿಜಯ್ ಹಜಾರೆ 2021 ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪಡಿಕ್ಕಲ್ ಸದ್ಯ ಮೊದಲನೇ ಸ್ಥಾನದಲ್ಲಿದ್ದಾರೆ. 572 ರನ್ ಗಳಿಸಿರುವ ಪಡಿಕ್ಕಲ್ ಮೊದಲ ಸ್ಥಾನದಲ್ಲಿದ್ದರೆ, ದ್ವಿತೀಯ ಸ್ಥಾನದಲ್ಲಿ ತನ್ಮಯ್ ಅಗರ್ವಾಲ್ (446 ರನ್), ತೃತೀಯ ಸ್ಥಾನದಲ್ಲಿ ರವಿಕುಮಾರ್ ಸಮರ್ಥ್ (413), ನಾಲ್ಕನೇ ಸ್ಥಾನದಲ್ಲಿ ಪೃಥ್ವಿ ಶಾ (404), ಐದನೇ ಸ್ಥಾನದಲ್ಲಿ 391 ತಿಲಕ್ ವರ್ಮಾ ಇದ್ದಾರೆ.

3 ಶತಕ, ವಿಶೇಷ ದಾಖಲೆ
ಆಡಿರುವ 5 ಇನ್ನಿಂಗ್ಸ್ಗಳಲ್ಲಿ 572 ರನ್ ಕಲೆ ಹಾಕಿರುವ ದೇವದತ್ ಪಡಿಕ್ಕಲ್ 152 ವೈಯಕ್ತಿಕ ಅತ್ಯಧಿಕ ರನ್, 190.66 ರನ್ ಸರಾಸರಿ, 97.78 ಸ್ಟ್ರೈಕ್ ರೇಟ್, 2 ಅರ್ಧ ಶತಕ, 3 ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 51 ಫೋರ್ಸ್, 18 ಸಿಕ್ಸರ್ಗಳು ಸೇರಿವೆ. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ 5 ಬಾರಿ 50+ ರನ್ ಗಳಿಸಿದ ವಿಶೇಷ ದಾಖಲೆಗೂ ಪಡಿಕ್ಕಲ್ ಪಾತ್ರರಾಗಿದ್ದಾರೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am