ಬ್ರೇಕಿಂಗ್ ನ್ಯೂಸ್
03-03-21 05:09 pm Source: MYKHEL ಕ್ರೀಡೆ
ಈ ಬಾರಿಯ ಐಪಿಎಲ್ ಹರಾಜಿನಲ್ಲಿ 14.26 ಕೋಟಿಗೆ ಆರ್ಸಿಬಿ ತಂಡಕ್ಕೆ ಹರಾಜಾಗುವ ಮೂಲಕ ಹುಬ್ಬೇರುವಂತೆ ಮಾಡಿದ್ದರು ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್. ಆದರೆ ಈ ಹರಾಜಿನ ನಂತರ ನಡೆದ ಸತತ ಎರಡು ಪಂದ್ಯಗಳಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಆದರೆ ಈಗ ಈ ಟೀಕೆಗಳಿಗೆ ಮ್ಯಾಕ್ಸ್ವೆಲ್ ತಮ್ಮ ಬ್ಯಾಟ್ನಿಂದಲೇ ಉತ್ತರವನ್ನು ನೀಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಕೇವಲ 31 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್ವೆಲ್ ಬರೊಬ್ಬರಿ 70 ರನ್ ಬಾರಿಸಿದ್ದಾರೆ. ಈ ಸ್ಪೋಟಕ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಒಳಗೊಂಡಿತ್ತು. 225.81ರ ಸ್ಟ್ರೈಕ್ರೇಟ್ನಲ್ಲಿ ಅವರು ಬ್ಯಾಟ್ ಬೀಸಿದ್ದರು.
ಇನ್ನು ಮ್ಯಾಕ್ಸ್ವೆಲ್ ಮಾತ್ರವಲ್ಲ ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ಇನ್ನೋರ್ವ ಆಟಗಾರ ಜೋಶ್ ಫಿಲಿಪ್ಪೆ ಕೂಡ ಉತ್ತಮ ಪ್ರದರ್ಶನ್ನು ನೀಡಿದ್ದಾರೆ. 27 ಎಸೆತಗಳಲ್ಲಿ ಫಿಲಿಪ್ಪೆ 43 ರನ್ಗಳ ಕೊಡುಗೆಯನ್ನು ನೀಡಿದ್ದಾರೆ. ಇನ್ನು ಆರ್ಸಿಬಿ ತಂಡದಿಂದ ಹೊರ ಬಿದ್ದು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾರಾಟವಾಗದೇ ಉಳಿದುಕೊಂಡ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಕೂಡ ಸ್ಪೋಟಕ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಫಿಂಚ್ 44 ಎಸೆತಗಳಲ್ಲಿ 69 ರನ್ ಗಳಿಸಿದರು.
ಆಸ್ಟ್ರೇಲಿಯಾ ತಂಡದ ಈ ಅಬ್ಬರದ ಆಟದಿಂದಾಗಿ ನಿಗದಿತ 20 ಓವರ್ಗಳಲ್ಲಿ 208 ರನ್ ಪೇರಿಸಲು ಶಕ್ತವಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಪರವಾಗಿ ಉತ್ತಮ ಜೊತೆಯಾಟ ಲಭ್ಯವಾಗಲಿಲ್ಲ. ಮಾರ್ಟಿನ್ ಗಪ್ಟಿಲ್ 43 ರನ್ ಗಳಿಸಿದರೆ ಡೆವೋನ್ ಕಾನ್ವೆ 38 ರನ್ಗಳ ಕೊಡುಗೆಯನ್ನು ನೀಡಿದರು. ಉಳಿದಂತೆ ಎಲ್ಲಾ ಆಟಗಾರರು ವಿಫಲರಾದರು.
ಆಸ್ಟ್ರೇಲಿಯಾ ತಂಡದ ಪರವಾಗಿ ಸ್ಪಿನ್ನರ್ ಆಶ್ಟನ್ ಅಗರ್ ನ್ಯೂಜಿಲೆಂಡ್ ತಂಡಕ್ಕೆ ಆಘಾತವನ್ನು ನೀಡಿದರು. ಕೀವಿಸ್ನ 6 ವಿಕೆಟ್ ಆಶ್ಟನ್ ಅಗರ್ ಪಾಲಾಯಿತು. ಹೀಗಾಗಿ ಆಸಿಸ್ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಲು ಕೀವಿಸ್ ಪಡೆ ಸಂಪೂರ್ಣವಾಗಿ ವಿಫಲವಾಗಿ 144 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ಅಂತರವನ್ನು 1-2ಕ್ಕೆ ಕುಗ್ಗಿಸಿಕೊಂಡಿದೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am