ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm