ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 12:19 pm
Udupi Correspondent
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm