ಬ್ರೇಕಿಂಗ್ ನ್ಯೂಸ್
03-03-21 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಇದೇ ಮೊದಲ ಬಾರಿಗೆ ಕಳೆದ ಬಾರಿಯ ಐಪಿಎಲ್ನಲ್ಲಿ ಮಿಂಚಿದ್ದ ಆಟಗಾರ ರಾಹುಲ್ ತೆವಾಟಿಯಾ ಆಯ್ಕೆಯಾಗಿದ್ದಾರೆ. ಆದರೆ ಈ ಅವಕಾಶ ರಾಹುಲ್ ತೆವಾಟಿಯಾ ಅವರ ಕೈತಪ್ಪುವ ಪರಿಸ್ಥಿತಿ ಉಂಟಾಗಿದೆ. ಫಿಟ್ನೆಸ್ ಪರೀಕ್ಷೆಯಲ್ಲಿ ರಾಹುಲ್ ತೆವಾಟಿಯಾ ವಿಫಲವಾಗಿದ್ದು ತಂಡವನ್ನು ಕೂಡಿಕೊಳ್ಳುವ ಬಗ್ಗೆ ಅನುಮಾನಗಳು ಎದ್ದಿದೆ.
ದಿ ಟೆಲಿಗ್ರಾಫ್ ವರದಿ ಮಾಡಿದಂತೆ ರಾಹುಲ್ ತೆವಾಟಿಯಾ ಮತ್ತು ವರುಣ್ ಚಕ್ರವರ್ತಿ ಫಿಟ್ನೆಸ್ ಟೆಸ್ಟ್ನಲ್ಲಿ ವಿಫಲರಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ತಂಡದ ಆಟಗಾರರಿಗೆ ನಿಗದಿ ಪಡಿಸಿದ ಮಾನದಂಡಕ್ಕಿಂತ ಈ ಇಬ್ಬರು ಆಟಗಾರರ ಫಿಟ್ನೆಸ್ ಸಾಮರ್ಥ್ಯ ಕೆಳಮಟ್ಟದಲ್ಲಿದೆ ಎಂದು ತಿಳಿದುಬಂದಿದೆ. ವರುಣ್ ಚಕ್ರವರ್ತಿ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗಿರುವುದು ಈ ಮೊದಲು ಬಹಿರಂಗವಾಗಿತ್ತು.
ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಆಟಗಾರರು ಯೋ-ಯೋ ಪರೀಕ್ಷೆಯಲ್ಲಿ 17:1 ಅಂಕವನ್ನು ಪಡೆದಿರಬೇಕು ಅಥವಾ 2 ಕಿಲೋ ವೀಟರ್ ಅಂತರವನ್ನು 8.3 ನಿಮಿಷಗಳ ಒಳಗೆ ತಲುಪಿರಬೇಕು.
ಹಾಗಾದಲ್ಲಿ ಮಾತ್ರವೇ ಟೀಮ್ ಇಂಡಿಯಾವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತದೆ. ಆದರೆ ರಾಹುಲ್ ತೆವಾಟಿಯಾ ಹಾಗೂ ವರುಣ್ ಚಕ್ರವರ್ತಿಗೆ ರಾಷ್ಟ್ರೀಯ ತಂಡವನ್ನು ಪ್ರತಿಧಿಸುವ ಅವಕಾಶ ಇಲ್ಲಿಗೇ ಅಂತ್ಯವಾಗುವುದಿಲ್ಲ. ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತದೆ. ಆಗ ಅವರು ತಮ್ಮ ನಿಗದಿತ ಮಾನದಂಡಗಳನ್ನು ಪೂರೈಸಿದರೆ ತಂಡವನ್ನು ಪ್ರವೇಶಿಸಲು ಅವಕಾಶ ಪಡೆಯುತ್ತಾರೆ.
ರಾಷ್ಟ್ರೀಯ ತಂಡದ ಆಯ್ಕೆಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್ ಈ ಆಟಗಾರರ ಲಭ್ಯತೆಯ ಬಗ್ಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮಾಹಿತಿಯ ಮೇರೆಗೆ ನಿರ್ಣಯವನ್ನು ತೆಗೆದುಕೊಳ್ಳಲಿದೆ. ಭಾರತೀಯ ಕ್ರಿಕೆಟ್ನಲ್ಲಿ ಅಪರಿಚಿತವಾಗಿದ್ದ ರಾಹುಲ್ ತೆವಾಟಿಯಾ ಕಳೆದ ಐಪಿಎಲ್ನಲ್ಲಿ ನಿಡಿದ ಕೆಲ ಅದ್ಭುತ ಪ್ರದರ್ಶನಗಳಿಂದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪಡೆಯುವಂತೆ ಮಾಡಿದೆ.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am