ಬ್ರೇಕಿಂಗ್ ನ್ಯೂಸ್
03-03-21 09:00 pm Source: MYKHEL ಕ್ರೀಡೆ
ಪಂಜಾಬ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಯಾವುದೇ ಪಂದ್ಯಗಳು ಪಂಜಾಬ್ನ ಮೊಹಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿಲ್ಲ. ಪಂಜಾಬ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಈ ಬಾರಿ ಮೊಹಾಲಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುತ್ತಿಲ್ಲ ಎಂದು ತಿಳಿದು ಬಂದಿದೆ.
ಆರಂಭದಲ್ಲಿ 2021ರ ಐಪಿಎಲ್ನ ಎಲ್ಲಾ ಪಂದ್ಯಗಳನ್ನು ಮಹಾರಾಷ್ಟ್ರ ಮತ್ತು ಪೂಣೆ ತಾಣಗಳಲ್ಲಿ ನಡೆಸುವುದಾಗಿ ಬಿಸಿಸಿಐ ಯೋಚಿಸಿತ್ತು ಎಂದು ಹೇಳಲಾಗಿತ್ತು. ಮಹಾರಾಷ್ಟ್ರದ ವಾಂಖೆಡೆ, ಬ್ರಬೋರ್ನ್, ಡಿವೈ ಪಾಟಿಲ್ ಮತ್ತು ರಿಲಯನ್ಸ್ ಸ್ಟೇಡಿಯಂಗಳಲ್ಲಿ ಲೀಗ್ ಪಂದ್ಯಗಳು ನಡೆಸಲು ಮತ್ತು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ಲೇಆಫ್ ಪಂದ್ಯಗಳನ್ನು ನಡೆಸಲು ಯೋಚಿಸಲಾಗಿತ್ತು.
ಆದರೆ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಬೈ ತಾಣವನ್ನು ಶಾರ್ಟ್ಲಿಸ್ಟ್ನಿಂದ ಹೊರಗಿಡಲಾಗಿದೆ. ಸದ್ಯಕ್ಕೆ ಅಹ್ಮದಾಬಾದ್, ಬೆಂಗಳೂರು, ಹೈದರಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ತಾಣಗಳನ್ನು ಶಾರ್ಟ್ ಲಿಸ್ಟ್ನಲ್ಲಿ ಇಡಲಾಗಿದೆ.
'ಮೊಹಾಲಿಯಲ್ಲಿ ಪಂದ್ಯ ಆಯೋಜಿಸಿ ಪ್ರತಿಭಟನಾ ನಿರತ ರೈತರು ಸ್ಟೇಡಿಯಂ ಕಡೆಗೆ ಬಂದು ಸಮಸ್ಯೆ ಸೃಷ್ಠಿಯಾಗೋದನ್ನು ನಾವು ಬಯಸುವುದಿಲ್ಲ. ಅದು ವಿಶ್ವದ ಎಲ್ಲಾ ಭಾಗಗಳಿಂದ ಮಾಧ್ಯಮಗಳನ್ನು ಆಕರ್ಷಿಸಲಿದೆ. ಮೊಹಾಲಿ ಸದ್ಯಕ್ಕೆ ತಾಣಗಳ ಸಾರ್ಟ್ ಲಿಸ್ಟ್ನಲ್ಲಿ ಇಲ್ಲ. ಪಂಜಾಬ್ ಹೊರತುಪಡಿಸಿ ಉಳಿದ ತಾಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ,' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm