ಬ್ರೇಕಿಂಗ್ ನ್ಯೂಸ್
07-03-21 04:11 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಮೂಲಕ ಐಪಿಎಲ್ ಆರಂಭದ ಚಟುವಟಿಕೆಗಳು ಮತ್ತಷ್ಟು ಗರಿಗೆದರಲು ಆರಂಭವಾಗಿದೆ. ಈ ವೇಳಾಪಟ್ಟಿ ಬಿಡುಗಡೆಯಾಗುವ ಮೂಲಕ ಸಾಕಷ್ಟು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಗಳೂ ದೊರೆತಿದೆ.
ಭಾರತ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಅಂತ್ಯವಾಗಿ 19 ದಿನಗಳ ಬಳಿಕ ಈ ಮಹತ್ವದ ಟೂರ್ನಿಗೆ ಚಾಲನೆ ದೊರೆಯಲಿದೆ. ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬುದರಿಂದ ಹಿಡಿದು ಈ ಬಾರಿಯ ಐಪಿಎಲ್ಗೆ ಆತಿಥ್ಯವಹಿಸುವ ಕ್ರೀಡಾಂಗಣಗಳು ಯಾವುದು? ಯಾವಾಗ ಫೈನಲ್ ಪಂದ್ಯ ನಡೆಯಲಿದೆ? ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಅವಕಾಶಗಳು ದೊರೆಯಲಿದೆಯಾ ಎಂಬುದು ಸೇರಿದಂತೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿತ್ತು. ಈ ಬಗೆಗಿನ ಉತ್ತರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು.
ಈ ಪ್ರಶ್ನೆಗಳಿಗೆ ಉತ್ತರಗಳು ದೊರೆಯುವ ಜೊತೆಗೆ ಕೆಲ ಕುತೂಹಲಕಾರಿ ಸಂಗತಿಗಳು ಕೂಡ ಬೆಳಕಿಗೆ ಬಂದಿದೆ.

ಆರು ಕ್ರೀಡಾಂಗಣದಲ್ಲಿ ಪಂದ್ಯಗಳು
ಭಾರತದಲ್ಲಿ ಪ್ರತಿ ಬಾರಿಯೂ ಪಂದ್ಯಗಳು ನಡೆಯುವಾಗ ಪ್ರತಿ ತಂಡಗಳಿಗೂ ತವರು ಅಂಗಳಗಳು ಇದ್ದು ತವರು ಹಾಗೂ ಹೊರಗಿನ ಅಂಗಳದಲ್ಲಿ ಪಂದ್ಯಗಳನ್ನು ಆಡುವುದು ಸಾಮಾನ್ಯವಾಗಿದೆ. ಆದರೆ ಈ ಬಾರಿ ಕೊರೊನಾ ವೈರಸ್ನ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೇವಲ 6 ಅಂಗಳಗಳಲ್ಲಿ ಪಂದ್ಯಗಳು ನಡೆಯಲಿದೆ. ಚೆನ್ನೈ, ಮುಂಬೈ, ಅಹ್ಮದಾಬಾದ್, ಡೆಲ್ಲಿ, ಬೆಂಗಳೂರು ಹಾಗೂ ಕೊಲ್ಕತ್ತಾ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದೆ

ತವರು ಅಂಗಳದಲ್ಲಿ ಆಡಲ್ಲ ತಂಡಗಳು
ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ಈ ಬಾರಿಯ ಐಪಿಎಲ್ನಲ್ಲಿ ಯಾವುದೇ ತಂಡಗಳು ಕೂಡ ತವರು ಕ್ರೀಡಾಂಗಣದಲ್ಲಿ ಎದುರಾಳಿಯನ್ನು ಎದುರಿಸುವುದಿಲ್ಲ. ಅಂದರೆ ಉದಾಹರಣೆಗೆ ಆರ್ಸಿಬಿ ತಂಡ ಬೆಂಗಳೂರಿನ ಕ್ರೀಡಾಂಗಣದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡುವುದಿಲ್ಲ. ಪ್ರತಿಯೊಂದು ತಂಡಕ್ಕೂ ಇದೇ ರೀತಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಪ್ರತಿಯೊಂದು ಪಂದ್ಯವೂ ಕೂಡ ತಟಸ್ಥ ಕೇಂದ್ರಗಳಲ್ಲಿಯೇ ನಡೆಯಲಿದೆ. ಹೆಚ್ಚಿನ ಪ್ರಯಾಣವನ್ನು ತಪ್ಪಿಸುವುದು ಹಾಗೂ ಪ್ರತಿ ಫ್ರಾಂಚೈಸಿಗೂ ಸಮಾನ ಅವಕಾಶವನ್ನು ನಿಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮೊದಲಾರ್ಧದಲ್ಲಿ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯ
ಕೊರೊನಾ ವೈರಸ್ನ ಮುಂಜಾಗ್ರಥಾ ಕ್ರಮವಾಗಿ ಈ ಬಾರಿಯ ಐಪಿಎಲ್ನ ಮೊದಲಾರ್ಧದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣಗಳಲ್ಲಿಯೇ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೊದಲಾರ್ಧ ಅಂತ್ಯದ ಬಳಿಕ ಮತ್ತೊಮ್ಮೆ ಪರಿಶೀಲನೆಯನ್ನು ನಡೆಸಿ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am