ಬ್ರೇಕಿಂಗ್ ನ್ಯೂಸ್
07-03-21 07:54 pm Headline Karnataka News Network ಕ್ರೀಡೆ
ಮುಂಬೈ, ಮಾ.7: ಕೊರೊನಾ ಕಾರಣ ಕಳೆದ ಬಾರಿ ಭಾರತದಲ್ಲಿ ಕ್ರಿಕೆಟ್ ಪ್ರಿಯರಿಗೆ ವಂಚಿತವಾಗಿದ್ದ ಐಪಿಎಲ್ ಪಂದ್ಯಾವಳಿ ಈ ಬಾರಿ ಎಪ್ರಿಲ್ 9ರಿಂದ ಎಂದಿನ ಅದ್ದೂರಿ ಶೈಲಿಯಲ್ಲೇ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಭಾರತದ ವಿವಿಧ ನಗರಗಳಲ್ಲಿ ನಡೆಯುವ ಐಪಿಎಲ್ ಪಂದ್ಯಾಟದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಎರಡು ವರ್ಷಗಳ ನಂತರ ಐಪಿಎಲ್ ಪಂದ್ಯಾಟ ಈ ಬಾರಿ ದೆಹಲಿ, ಚೆನ್ನೈ, ಬೆಂಗಳೂರು, ಕೊಲ್ಕತ್ತಾ, ಮುಂಬೈ, ಅಹಮದಾಬಾದ್ ನಗರಗಳಲ್ಲಿ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಎಪ್ರಿಲ್ 9ರಂದು ಉದ್ಘಾಟನಾ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಚೆನ್ನೈ ಕಿಂಗ್ಸ್ ಮತ್ತು ಬೆಂಗಳೂರು ರಾಯಲ್ ಚಾಲೆಂಜರ್ಸ್ ಸೆಣಸಲಿದೆ.
ಫೈನಲ್ ಪಂದ್ಯಾಟ ಮೇ 30ರಂದು ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದ್ದೂರಿ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇತ್ತೀಚೆಗಷ್ಟೆ ಒಂದೂವರೆ ಲಕ್ಷ ಆಸನ ಸಾಮರ್ಥ್ಯವುಳ್ಳ ಜಗತ್ತಿನ ಅತಿ ದೊಡ್ಡ ಕ್ರೀಡಾಂಗಣವಾಗಿ ಇಲ್ಲಿನ ಸ್ಟೇಡಿಯಂ ಅನ್ನು ಪರಿವರ್ತಿಸಲಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆ ಮಾಡಿದ್ದರು. ಇದೀಗ ಮೊದಲ ಬಾರಿಗೆ ಐಪಿಎಲ್ ಪಂದ್ಯಾವಳಿ ಅದರಲ್ಲಿ ನಡೆಯಲಿದ್ದು, ಫೈನಲ್ ಪಂದ್ಯಾಟದ ಆಕರ್ಷಣೆಗೆ ಬೃಹತ್ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಒಟ್ಟು 56 ಲೀಗ್ ಪಂದ್ಯಗಳಲ್ಲಿ ಚೆನ್ನೈ, ಬೆಂಗಳೂರು, ಕೊಲ್ಕತ್ತಾ, ಮುಂಬೈ ತಲಾ ಹತ್ತು ಪಂದ್ಯಗಳನ್ನು ಆಯೋಜನೆ ಮಾಡಲಿವೆ. ಅಹಮದಾಬಾದ್, ದೆಹಲಿ ತಲಾ 8 ಪಂದ್ಯಗಳನ್ನು ಆಯೋಜಿಸಲಿದೆ. ಆದರೆ, ಈ ಬಾರಿ ವಿಶೇಷ ಏನಂದ್ರೆ, ಯಾವುದೇ ತಂಡವು ತಮ್ಮ ಹೋಮ್ ಪಿಚ್ ನಲ್ಲಿ ಆಡುವುದಿಲ್ಲ. ಮಧ್ಯಾಹ್ನ 3.30ಕ್ಕೆ ಮತ್ತು ಸಂಜೆಯ ಪಂದ್ಯ 7.30ಕ್ಕೆ ಆರಂಭಗೊಳ್ಳಲಿದೆ.
🚨 BCCI announces schedule for VIVO IPL 2021 🚨
— IndianPremierLeague (@IPL) March 7, 2021
The season will kickstart on 9th April in Chennai and the final will take place on May 30th at the Narendra Modi Stadium, Ahmedabad.
More details here - https://t.co/yKxJujGGcD #VIVOIPL pic.twitter.com/qfaKS6prAJ
The BCCI announced the schedule for the Indian Premier League 2021 on Sunday. The IPL 2021 season will begin on April 9 in Chennai, with defending champions Mumbai Indians taking on Royal Challengers Bangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm