ಬ್ರೇಕಿಂಗ್ ನ್ಯೂಸ್
12-03-21 11:00 am Source: MYKHEL ಕ್ರೀಡೆ
ಅಬುಧಾಬಿ: ಅಫ್ಘಾನಿಸ್ತಾನದ ಬ್ಯಾಟ್ಸ್ಮನ್ ಹಶ್ಮತುಲ್ಲ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಿಂಬಾಬ್ವೆ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹಶ್ಮತುಲ್ಲ ಅಫ್ಘಾನ್ ಪರ ಇತಿಹಾಸ ಬರೆದಿದ್ದಾರೆ. ಶಾಹಿದಿ ಮತ್ತು ನಾಯಕ ಅಸ್ಘರ್ ಅಫ್ಘಾನ್ ರನ್ ಕೊಡುಗೆಯೊಂದಿಗೆ ಅಫ್ಘಾನ್ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನದಿಂದ 4ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಹಶ್ಮತುಲ್ಲ ಶಾಹಿದಿ, 443 ಎಸೆತಗಳಲ್ಲಿ 200 ರನ್ ಬಾರಿಸಿದ್ದಾರೆ. ಶಾಹಿದಿ ದ್ವಿಶತಕ ಬಾರಿಸುತ್ತಲೇ ಅವರ ಹಸರಿನಲ್ಲಿ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ.

ಹೊಸ ದಾಖಲೆ ನಿರ್ಮಾಣ
ಜಿಂಬಾಬ್ವೆ ವಿರುದ್ಧದ ಮೊದಲನೇ ಇನ್ನಿಂಗ್ಸ್ನಲ್ಲಿ ಅಶ್ಮತುಲ್ಲ ಶಾಹಿದಿ ಬಾರಿಸಿದ 200 ರನ್ನಿಂದ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಫ್ಘಾನಿಸ್ತಾನ ಪರ ದ್ವಿಶತಕ ಬಾರಿಸಿದ ಮೊದಲನೇ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಕಡಿಮೆ ಅನುಭವಿ ತಂಡವೆನಿಸಿರುವ ಅಫ್ಘಾನ್ಗೆ ಶಾಹಿದಿ ಸಾಧನೆ ಇನ್ನಷ್ಟು ಬಲ ತುಂಬಿದೆ.
ಭಾರತ ವಿರುದ್ಧ ಪಾದಾರ್ಪಣೆ
26ರ ಹರೆಯದ ಶಾಹಿದಿ, 5 ಟೆಸ್ಟ್ ಪಂದ್ಯಗಳಲ್ಲಿ 347 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ, 1 ದ್ವಿಶತಕ ಸೇರಿದೆ. ಇನ್ನು 42 ಏಕದಿನ ಪಂದ್ಯಗಳಲ್ಲಿ 1155 ರನ್ ಬಾರಿಸಿದ್ದಾರೆ. ಕೀನ್ಯಾ ವಿರುದ್ಧ 2013ರಲ್ಲಿ ಏಕದಿನ ಪಾದಾರ್ಪಣೆ ಮಾಡಿದ್ದ ಶಾಹಿದಿ 2018ರಲ್ಲಿ ಭಾರತ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು.

ಅಫ್ಘಾನಿಸ್ತಾನ ಭರ್ಜರಿ ರನ್
ಬ್ಯಾಟಿಂಗ್ ಆಯ್ದುಕೊಂಡಿದ್ದ ಅಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಹಾಕಿದೆ. ಇಬ್ರಾಹಿಂ ಝದ್ರನ್ 72, ಝಾವೆದ್ ಅಹ್ಮದಿ 4, ರಹಮತ್ ಶಾ 23, ಹಶ್ಮತುಲ್ಲ ಶಾಹಿದಿ ಅಜೇಯ 200, ನಾಯಕ ಅಸ್ಘರ್ ಅಫ್ಘಾನ್ 164, ನಾಸಿರ್ ಜಮಾಲ್ ಅಜೇಯ 55 ರನ್ ಬಾರಿಸಿದ್ದರು. ಅಫ್ಘಾನ್ 160.4 ಓವರ್ಗೆ 4 ವಿಕೆಟ್ ಕಳೆದು 545 ರನ್ ಕಲೆ ಹಾಕಿ ಡಿಕ್ಲೇರ್ ಘೋಷಿಸಿತ್ತು.
This News Article Is A Cop Of MYKHEL
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm