ಬ್ರೇಕಿಂಗ್ ನ್ಯೂಸ್
12-03-21 11:00 am Source: MYKHEL ಕ್ರೀಡೆ
ಅಬುಧಾಬಿ: ಅಫ್ಘಾನಿಸ್ತಾನದ ಬ್ಯಾಟ್ಸ್ಮನ್ ಹಶ್ಮತುಲ್ಲ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಜಿಂಬಾಬ್ವೆ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹಶ್ಮತುಲ್ಲ ಅಫ್ಘಾನ್ ಪರ ಇತಿಹಾಸ ಬರೆದಿದ್ದಾರೆ. ಶಾಹಿದಿ ಮತ್ತು ನಾಯಕ ಅಸ್ಘರ್ ಅಫ್ಘಾನ್ ರನ್ ಕೊಡುಗೆಯೊಂದಿಗೆ ಅಫ್ಘಾನ್ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನದಿಂದ 4ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಹಶ್ಮತುಲ್ಲ ಶಾಹಿದಿ, 443 ಎಸೆತಗಳಲ್ಲಿ 200 ರನ್ ಬಾರಿಸಿದ್ದಾರೆ. ಶಾಹಿದಿ ದ್ವಿಶತಕ ಬಾರಿಸುತ್ತಲೇ ಅವರ ಹಸರಿನಲ್ಲಿ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ.

ಹೊಸ ದಾಖಲೆ ನಿರ್ಮಾಣ
ಜಿಂಬಾಬ್ವೆ ವಿರುದ್ಧದ ಮೊದಲನೇ ಇನ್ನಿಂಗ್ಸ್ನಲ್ಲಿ ಅಶ್ಮತುಲ್ಲ ಶಾಹಿದಿ ಬಾರಿಸಿದ 200 ರನ್ನಿಂದ ಶಾಹಿದಿ ಟೆಸ್ಟ್ ಕ್ರಿಕೆಟ್ನಲ್ಲಿ ಅಫ್ಘಾನಿಸ್ತಾನ ಪರ ದ್ವಿಶತಕ ಬಾರಿಸಿದ ಮೊದಲನೇ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಕಡಿಮೆ ಅನುಭವಿ ತಂಡವೆನಿಸಿರುವ ಅಫ್ಘಾನ್ಗೆ ಶಾಹಿದಿ ಸಾಧನೆ ಇನ್ನಷ್ಟು ಬಲ ತುಂಬಿದೆ.
ಭಾರತ ವಿರುದ್ಧ ಪಾದಾರ್ಪಣೆ
26ರ ಹರೆಯದ ಶಾಹಿದಿ, 5 ಟೆಸ್ಟ್ ಪಂದ್ಯಗಳಲ್ಲಿ 347 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ, 1 ದ್ವಿಶತಕ ಸೇರಿದೆ. ಇನ್ನು 42 ಏಕದಿನ ಪಂದ್ಯಗಳಲ್ಲಿ 1155 ರನ್ ಬಾರಿಸಿದ್ದಾರೆ. ಕೀನ್ಯಾ ವಿರುದ್ಧ 2013ರಲ್ಲಿ ಏಕದಿನ ಪಾದಾರ್ಪಣೆ ಮಾಡಿದ್ದ ಶಾಹಿದಿ 2018ರಲ್ಲಿ ಭಾರತ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು.

ಅಫ್ಘಾನಿಸ್ತಾನ ಭರ್ಜರಿ ರನ್
ಬ್ಯಾಟಿಂಗ್ ಆಯ್ದುಕೊಂಡಿದ್ದ ಅಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ನಲ್ಲಿ ಭರ್ಜರಿ ರನ್ ಕಲೆ ಹಾಕಿದೆ. ಇಬ್ರಾಹಿಂ ಝದ್ರನ್ 72, ಝಾವೆದ್ ಅಹ್ಮದಿ 4, ರಹಮತ್ ಶಾ 23, ಹಶ್ಮತುಲ್ಲ ಶಾಹಿದಿ ಅಜೇಯ 200, ನಾಯಕ ಅಸ್ಘರ್ ಅಫ್ಘಾನ್ 164, ನಾಸಿರ್ ಜಮಾಲ್ ಅಜೇಯ 55 ರನ್ ಬಾರಿಸಿದ್ದರು. ಅಫ್ಘಾನ್ 160.4 ಓವರ್ಗೆ 4 ವಿಕೆಟ್ ಕಳೆದು 545 ರನ್ ಕಲೆ ಹಾಕಿ ಡಿಕ್ಲೇರ್ ಘೋಷಿಸಿತ್ತು.
This News Article Is A Cop Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm