ಬ್ರೇಕಿಂಗ್ ನ್ಯೂಸ್
15-03-21 11:18 am source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಚೊಚ್ಚಲ ಪಂದ್ಯದಲ್ಲಿ ಅರ್ಧ ಶತಕವನ್ನು ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಸ್ಮರಣೀಯ ಪದಾರ್ಪಣೆಯನ್ನು ಮಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಭಾರತದ ಪರವಾಗಿ ಬ್ಯಾಟಿಂಗ್ಗೆ ಇಳಿಯುವ ಮುನ್ನ ಇಶಾನ್ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರಿಂದ ಉಪಯುಕ್ತ ಸಲಹೆಯನ್ನು ಪಡೆದುಕೊಂಡಿದ್ದರು.
ಪಂದ್ಯದ ಅಂತ್ಯದ ಬಳಿಕ ಇಶಾನ್ ಕಿಶನ್ ಮಾಧ್ಯಗಳೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. "ಪಂದ್ಯದ ಆರಂಭಕ್ಕೆ ಮುನ್ನ ರೋಹಿತ್ ಭಾಯ್ ನೀನು ಇನ್ನಿಂಗ್ಸ್ ಆರಂಬಿಸಲಿದ್ದೀಯಾ ಎಂದು ತಿಳಿಸಿದರು. ಐಪಿಎಲ್ನಲ್ಲಿ ನೀನು ಆಡಿದಂತೆಯೇ ನಿರ್ಭೀತಿಯಿಂದ ಹಾಗೂ ಸ್ಪಷ್ಟವಾಗಿ ಆಡು ಎಂದು ಹೇಳಿದ್ದರು" ಎಂದು ಇಶಾನ್ ಕಿಶನ್ ವಿವರಿಸಿದ್ದಾರೆ.
ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ "ಆದರೆ ರಾಷ್ಟ್ರ ಧ್ವಜವನ್ನು ನೋಡಿದ ನಂತರ ಹಾಗೂ ಟೀಮ್ ಇಂಡಿಯಾ ಜರ್ಸಿಯನ್ನು ತೊಟ್ಟ ನಂತರ ನಾನು ಸ್ವಲ್ಪ ನರ್ವಸ್ ಆದೆ. ಆದರೆ ನಾನು ನನ್ನ ಅತ್ಯುತ್ತಮ ಆಟವನ್ನು ನೀಡಲು ಬಯಸಿದ್ದೆ" ಎಂದು ಇಶಾನ್ ಕಿಶನ್ ಮೊದಲ ಪಂದ್ಯದ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.
ಇಶಾನ್ ಕಿಶನ್ ದೇಶೀಯ ಕ್ರಿಕೆಟ್ನಲ್ಲಿ ಹಾಗೂ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಮುಂಬೈ ತಂಡದ ಪರವಾಗಿ ಕಣಕ್ಕಿಳಿಯುವ ಇಶಾನ್ ಕಿಶನ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಶ್ರಾಂತಿಯನ್ನು ಪಡೆದಿದ್ದರು. ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರೆ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಕೆಎಲ್ ರಾಹುಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ಹೊಣೆಹೊತ್ತಿದ್ದರು.
This News Article Is A Copy Of MYKHEL
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm