ಬ್ರೇಕಿಂಗ್ ನ್ಯೂಸ್
15-03-21 11:18 am source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಪರವಾಗಿ ಮೊದಲ ಬಾರಿಗೆ ಕಣಕ್ಕಿಳಿದ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಚೊಚ್ಚಲ ಪಂದ್ಯದಲ್ಲಿ ಅರ್ಧ ಶತಕವನ್ನು ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಸ್ಮರಣೀಯ ಪದಾರ್ಪಣೆಯನ್ನು ಮಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಭಾರತದ ಪರವಾಗಿ ಬ್ಯಾಟಿಂಗ್ಗೆ ಇಳಿಯುವ ಮುನ್ನ ಇಶಾನ್ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರಿಂದ ಉಪಯುಕ್ತ ಸಲಹೆಯನ್ನು ಪಡೆದುಕೊಂಡಿದ್ದರು.
ಪಂದ್ಯದ ಅಂತ್ಯದ ಬಳಿಕ ಇಶಾನ್ ಕಿಶನ್ ಮಾಧ್ಯಗಳೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. "ಪಂದ್ಯದ ಆರಂಭಕ್ಕೆ ಮುನ್ನ ರೋಹಿತ್ ಭಾಯ್ ನೀನು ಇನ್ನಿಂಗ್ಸ್ ಆರಂಬಿಸಲಿದ್ದೀಯಾ ಎಂದು ತಿಳಿಸಿದರು. ಐಪಿಎಲ್ನಲ್ಲಿ ನೀನು ಆಡಿದಂತೆಯೇ ನಿರ್ಭೀತಿಯಿಂದ ಹಾಗೂ ಸ್ಪಷ್ಟವಾಗಿ ಆಡು ಎಂದು ಹೇಳಿದ್ದರು" ಎಂದು ಇಶಾನ್ ಕಿಶನ್ ವಿವರಿಸಿದ್ದಾರೆ.
ಭಾರತ vs ಇಂಗ್ಲೆಂಡ್: ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ "ಆದರೆ ರಾಷ್ಟ್ರ ಧ್ವಜವನ್ನು ನೋಡಿದ ನಂತರ ಹಾಗೂ ಟೀಮ್ ಇಂಡಿಯಾ ಜರ್ಸಿಯನ್ನು ತೊಟ್ಟ ನಂತರ ನಾನು ಸ್ವಲ್ಪ ನರ್ವಸ್ ಆದೆ. ಆದರೆ ನಾನು ನನ್ನ ಅತ್ಯುತ್ತಮ ಆಟವನ್ನು ನೀಡಲು ಬಯಸಿದ್ದೆ" ಎಂದು ಇಶಾನ್ ಕಿಶನ್ ಮೊದಲ ಪಂದ್ಯದ ಬಗ್ಗೆ ಮಾತನಾಡುತ್ತಾ ಹೇಳಿದ್ದಾರೆ.
ಇಶಾನ್ ಕಿಶನ್ ದೇಶೀಯ ಕ್ರಿಕೆಟ್ನಲ್ಲಿ ಹಾಗೂ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಮುಂಬೈ ತಂಡದ ಪರವಾಗಿ ಕಣಕ್ಕಿಳಿಯುವ ಇಶಾನ್ ಕಿಶನ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವಿಶ್ರಾಂತಿಯನ್ನು ಪಡೆದಿದ್ದರು. ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದರೆ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಕೆಎಲ್ ರಾಹುಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ಹೊಣೆಹೊತ್ತಿದ್ದರು.
This News Article Is A Copy Of MYKHEL
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 02:47 pm
Mangalore Correspondent
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm