ಬ್ರೇಕಿಂಗ್ ನ್ಯೂಸ್
15-03-21 12:53 pm source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ನೀಡಿದರೆ ಬೌಲಿಂಗ್ನಲ್ಲಿ ಎಲ್ಲ ಆಟಗಾರರೂ ಉತ್ತಮ ಪ್ರದರ್ಶನ ನೀಡುವಲ್ಲಿ ಸಫಲವಾದರು. ಹೀಗಾಗಿ ಮೂರನೇ ಪಂದ್ಯಕ್ಕೆ ಭಾರತದ ಆಡುವ ಬಳದಲ್ಲಿ ಬದಲಾವಣೆಯಾಗುತ್ತಾ ಎಂಬುದು ಪ್ರಶ್ನೆಯಾಗಿದೆ.
ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿ ಕಣಕ್ಕಿಳಿದಿತ್ತು. ಆರಂಭಿಕನಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಿಖರ್ ಧವನ್ ಬದಲಿಗೆ ಇಶಾನ್ ಕಿಶನ್ ಅವಕಾಶವನ್ನು ಪಡೆದುಕೊಂಡರು. ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ದಾಳಿಯಿಂದ ಮಿಂಚಿದ್ದ ಅಕ್ಷರ್ ಪಟೇಲ್ ಎರಡನೇ ಪಂದ್ಯದಿಂದ ಹೊರಗುಳಿದು ಆ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಡಿಲಾಗಿತ್ತು. ಭಾರತ vs ಇಂಗ್ಲೆಂಡ್:
ರನ್ ಮಷಿನ್ ವಿರಾಟ್ ಕೊಹ್ಲಿ ದಾಖಲೆ ಎರಡನೇ ಪಂದ್ಯದಲ್ಲಿ ಭಾರತ ತಂಡದ ಈ ಸಂಯೋಜನೆ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿತ್ತು. ಹೀಗಾಗಿ ಇದರಲ್ಲಿ ಬದಲಾವಣೆ ಮಾಡುವ ಸಂಭವ ತೀರಾ ಕಡಿಮೆಯಿದೆ. ಆದರೆ ಕಳೆದ ಎರಡು ಪಂದ್ಯಗಳಲ್ಲಿಯೂ ಆರಂಭಿಕ ಆಟಗಾರನಾಗಿ ಕೆಎಲ್ ರಾಹುಲ್ ವಿಫಲರಾಗಿದ್ದಾರೆ. ಅವರ ಸ್ಥಾನದ ಬಗ್ಗೆ ಮಾತ್ರ ಅನುಮಾನಗಳಿವೆ. ಆರಂಭಿಕ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿಯನ್ನು ನೀಡಲಾಗಿತ್ತು. ಹೀಗಾಗಿ ಕೆಎಲ್ ರಾಹುಲ್ ರೋಹಿತ್ ಶರ್ಮಾಗೆ ಸ್ಥಾನವನ್ನು ಬಿಟ್ಟುಕೊಡಬೇಕಾಗಬಹುದು ಎಂಬ ಲೆಕ್ಕಾಚಾರಗಳು ನಡೆಯುತ್ತಿದೆ.
ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆಗಳು ಕಡಿಮೆಯಿದೆ. ಕಿಶನ್ ಸ್ಫೋಟಕ ಅರ್ಧಶತಕ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಭಾರತೀಯ ತಂಡದಲ್ಲಿ ಆಯ್ಕೆಗಾರರು ಹಾಗೂ ನಾಯಕ ವಿರಾಟ್ ಕೊಹ್ಲಿ ಯಾರಿಗೆಲ್ಲಾ ಅವಕಾಶವನ್ನು ನೀಡುತ್ತಿದ್ದಾರೋ ಅವರು ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಹೀಗಾಗಿ ಈ ಆಟಗಾರರನ್ನು ಮುಂದಿನ ಪಂದ್ಯದಿಂದ ಹೊರಗಿಡಲಾಗದ ಪರಿಸ್ಥಿತಿಯಿದೆ. ಎರಡನೇ ಪಂದ್ಯದಲ್ಲಿ ಭಾರತ ಗೆಲುವನ್ನು ಸಾಧಿಸಿದ ಹಿನ್ನೆಲೆಯಲ್ಲಿ ವಿನನಿಂಗ್ ಕಾಂಬಿನೇಶನ್ ಬದಲಾವಣೆ ಕಷ್ಟ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm