ಬ್ರೇಕಿಂಗ್ ನ್ಯೂಸ್
15-03-21 04:40 pm source: MYKHEL ಕ್ರೀಡೆ
ಗೋವಾ: ಟೀಮ್ ಇಂಡಿಯಾದ ಪ್ರಮುಖ ವೇಗಿ, ಐಪಿಎಲ್ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ನ ಪ್ರಮುಖ ಬೌಲರ್ ಜಸ್ಪ್ರೀತ್ ಬೂಮ್ರಾ ತನ್ನ ಬದುಕಿನ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬೂಮ್ರಾ ವಿವಾಹ ಗೋವಾದಲ್ಲಿಂದು (ಮಾರ್ಚ್ 15) ಅದ್ದೂರಿಯಾಗಿ ನೆರವೇರಿದೆ. ಖಾಸಗಿ ಸಮಾರಂಭದಲ್ಲಿ ಬೂಮ್ರಾ-ಸಂಜನಾ ಒಂಟಿಯಿಂದ ಜಂಟಿ ಜೀವನಕ್ಕೆ ಬದಲಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ಈ ಅಂತರದಲ್ಲಿ ಸರಣಿ ಗೆದ್ದರೆ ಭಾರತ ವಿಶ್ವ ನಂ.1 ಟಿ20 ತಂಡವಾಗಲಿದೆ! ಲಭ್ಯ ಮಾಹಿತಿಯ ಪ್ರಕಾರ ಜಸ್ಪ್ರೀತ್ ಬೂಮ್ರಾ-ಸಂಜನಾ ಗಣೇಶನ್ ವಿವಾಹ ಪೂರ್ವಾಚರಣೆಗಳು ಗೋವಾದಲ್ಲಿ ಭಾನುವಾರ (ಮಾರ್ಚ್ 14) ನೆರವೇರಿದೆ. ಮದುವೆ ಕಾರ್ಯಕ್ರಮವನ್ನು ಸೋಮವಾರ (ಮಾರ್ಚ್ 15) ಇಟ್ಟುಕೊಳ್ಳಲಾಗಿತ್ತು. ಅಂದ್ಹಾಗೆ ಮದುವೆಯ ಫೋಟೋಗಳನ್ನು ಬೂಮ್ರಾ ತನ್ನ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.
“Love, if it finds you worthy, directs your course.”
— Jasprit Bumrah (@Jaspritbumrah93) March 15, 2021
Steered by love, we have begun a new journey together. Today is one of the happiest days of our lives and we feel blessed to be able to share the news of our wedding and our joy with you.
Jasprit & Sanjana pic.twitter.com/EQuRUNa0Xc
ಪ್ರಮುಖರಿಗೆ ಆಹ್ವಾನವಿಲ್ಲ
ವೈಹಾಹಿಕ ಜೀವನಕ್ಕೆ ಕಾಲಿರಿಸುತ್ತಿರುವ 27ರ ಹರೆಯದ ಜಸ್ಪ್ರೀತ್ ಬೂಮ್ರಾ ಮತ್ತು ಸಂಜನಾ ಗಣೇಶನ್ ತಮ್ಮ ಮದುವೆಗೆ ಪ್ರಮುಖ ಸೆಲೆಬ್ರಿಟಿಗಳನ್ನು ಆಹ್ವಾನಿಸಿಲ್ಲ. ಇಬ್ಬರ ಕುಟುಂಬದ ಪ್ರಮುಖರು ಮತ್ತು ತೀರಾ ಹತ್ತಿರ ಸ್ನೇಹಿತರು ಮಾತ್ರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಕ್ಯಮರಾ, ಫೋನ್ ಬಳಸುವಂತಿಲ್ಲ
ಅದ್ಯಾಕೋ ಗೊತ್ತಿಲ್ಲ. ತಮ್ಮ ಮದುವೆಯ ಕ್ಷಣಗಳನ್ನು ಗುಟ್ಟಾಗಿ ಇಡಲು ಬೂಮ್ರಾ ಮತ್ತು ಸಂಜನಾ ಬಯಸಿದಂತಿದೆ. ಮದುವೆ ಸಮಾರಂಭಕ್ಕೆ ಆಹ್ವಾನಿಸಲಾದ ಅತಿಥಿಗಳೂ ಕೂಡ ಕ್ಯಮರಾ ಮತ್ತು ಮೊಬೈಲ್ ಫೋನ್ ಕೊಂಡೊಯ್ಯದಂತೆ ಸೂಚಿಸಲಾಗಿತ್ತು ಎನ್ನಲಾಗಿದೆ. ಮದುವೆಯಲ್ಲಿ ಕೇವಲ 20 ಅತಿಥಿಗಳು ಪಾಲ್ಗೊಂಡಿದ್ದಾಗಿ ತಿಳಿದು ಬಂದಿದೆ (ಹಿಂದೊಮ್ಮೆ ಸಂಜನಾ ಅವರು ಬೂಮ್ರಾ ಅವರನ್ನು ಸಂದರ್ಶನ ಮಾಡಿದ್ದ ವೀಡಿಯೋ ಮೇಲಿದೆ).
ಯಾರೀ ಸಂಜನಾ ಗಣೇಶನ್?
ಬೂಮ್ರಾ ಮದುವೆಯಾಗುತ್ತಿರುವ ಸಂಜನಾ ಗಣೇಶನ್ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲಿಸ್ಟ್ ಮತ್ತು ಜನಪ್ರಿಯ ಟಿವಿ ಆ್ಯಂಕರ್. ಸ್ಟಾರ್ ಸ್ಪೋರ್ಟ್ಸ್ನ ಆ್ಯಂಕರ್ಗಳಲ್ಲಿ ಒಬ್ಬರಾಗಿರುವ ಸಂಜನಾ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಕವರ್ ಮಾಡ್ತಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ಪರವಾಗಿಯೂ ಕೆಲಸ ಮಾಡುತ್ತಾರೆ. ಮದುವೆ ಕಾರಣದಿಂದ ಬೂಮ್ರಾ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಆರ್ಧದಿಂದಲೇ ಹೊರಗುಳಿದಿದ್ದರು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm