ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm