ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm