ಬ್ರೇಕಿಂಗ್ ನ್ಯೂಸ್
18-03-21 04:09 pm Source: MYKHEL ಕ್ರೀಡೆ
ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿ ಐಪಿಎಲ್ನಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಪ್ರತಿ ಬಾರಿಯೂ ಪ್ಲೇ ಆಫ್ಗೆ ಲಗ್ಗೆ ಇಡುತ್ತಿದ್ದ ಚೆನ್ನೈ ತಂಡ ಕಳೆದ ಬಾರಿ ನಿರಾಸೆ ಮೂಡಿಸಿತ್ತು. ಹೀಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಗೆಲುವಿನ ಹಾದಿಗೆ ಮರಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲರಿಗಿಂತ ಮೊದಲು ಅಭ್ಯಾಸವನ್ನು ಆರಂಭಿಸಿದೆ.
ಮಹೇಂದ್ರ ಸಿಂಗ್ ಧೋನಿ ಅವರು ಈ ಬಾರಿಯ ಐಪಿಎಲ್ ಅನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ಬಹಳ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಧೋನಿ ಅವರ ಜೊತೆ ಚೆನ್ನೈ ತಂಡದ ಇತರ ಆಟಗಾರರು ಸಹ ಮೈದಾನದಲ್ಲಿ ಬೆವರು ಹರಿಸಿ ಅಭ್ಯಾಸ ಮಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗಿರುವ ಆಂಧ್ರಪ್ರದೇಶದ ಹರಿಶಂಕರ್ ರೆಡ್ಡಿ ಅಭ್ಯಾಸದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಲಗೈ ಮಧ್ಯಮವೇಗಿ ಹರಿಶಂಕರ್ ರೆಡ್ಡಿ ಎಸೆದ ಎಸೆತಕ್ಕೆ ಎಂಎಸ್ ಧೋನಿ ಅವರು ಕ್ಲೀನ್ ಬೌಲ್ಡ್ ಆಗಿದ್ದಾರೆ. ಹರಿ ಶಂಕರ್ ರೆಡ್ಡಿ ಅವರ ಈ ಎಸೆತಕ್ಕೆ ಇತರ ಬೌಲರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಧೋನಿ ಅವರೂ ಸಹ ಹರಿ ಶಂಕರ್ ರೆಡ್ಡಿ ಅವರು ಎಸೆದ ಎಸೆತಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರ್ಷದ ಹರಿ ಶಂಕರ್ ರೆಡ್ಡಿ ಆಂಧ್ರಪ್ರದೇಶ ತಂಡದ ಆಟಗಾರ. ಆಂಧ್ರಪ್ರದೇಶ ಅಂಡರ್-19 ತಂಡದಲ್ಲಿಯೂ ಸಹ ಹರಿಶಂಕರ್ ರೆಡ್ಡಿ ಆಡಿರುವ ಅನುಭವ ಹೊಂದಿದ್ದಾರೆ. ಈಗ ಐಪಿಎಲ್ನಲ್ಲಿ ಚೆನ್ನೈ ಪಾಲಾಗಿರುವ ಹರಿ ಶಂಕರ್ ರೆಡ್ಡಿ ಅಭ್ಯಾಸದ ವೇಳೆಯೇ ವೈರಲ್ ಆಗಿದ್ದು ಟೂರ್ನಿಯಲ್ಲಿ ಮಿಂಚುತ್ತಾರಾ ಎಂದು ಕಾದು ನೋಡಬೇಕು.
This News Article Is A Copy Of MYKHEL
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm