ಬ್ರೇಕಿಂಗ್ ನ್ಯೂಸ್
23-03-21 03:53 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಪದಾರ್ಪಣೆಯನ್ನು ಮಾಡಿದ್ದಾರೆ. ಕನ್ನಡಿದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್ ಪಾಂಡ್ಯ ಚೊಚ್ಚಲ ಬಾರಿಗೆ ಏಕದಿನ ಮಾದರಿಯಲ್ಲಿ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಇದೇ ಮೊದಲ ಬಾರಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಕರೆಯನ್ನು ಪಡೆದಿದ್ದರು.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೇ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್ನಲ್ಲಿ ನೀಡಿದ ಪ್ರದರ್ಶನದ ಕಾ್ರಣದಿಮದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪ್ರಸಿದ್ಧ್ ಕೃಷ್ಣ ಗಿಟ್ಟಿಸಿಕೊಂಡಿದ್ದಾರೆ.
ಪ್ರಸಿದ್ಧ್ ಕೃಷ್ಣ 48 ಲಿಸ್ಟ್ ಎ ಪಂದ್ಯಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ 23.07ರ ಸರಾಸರಿಯಲ್ಲಿ 81 ವಿಕೆಟ್ ಪಡೆದುಕೊಂಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಕರ್ನಾಟಕದ ಈ 25ರ ಹರೆಯದ ವೇಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಕೆಲ ಗಮನಾರ್ಹ ಪ್ರದರ್ಶನಗಳನ್ನು ನೀಡಿದ್ದಾರೆ ಪ್ರಸಿದ್ಧ್ ಕೃಷ್ಣ. ಐಪಿಎಲ್ನಲ್ಲಿ ಕೆಕೆಆರ್ ಪರವಾಗಿ 21 ಪಂದ್ಯಗಳಲ್ಲಿ ಕಣಕ್ಕಿಳಿದು 18 ವಿಕೆಟ್ ಪಡೆದಿದ್ದಾರೆ.
ಇನ್ನು ಕೃನಾಲ್ ಪಾಂಡ್ಯ ಈ ಹಿಂದೆ ಟಿ20 ಮಾದರಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಏಕದಿನ ಮಾದರಿಯಲ್ಲಿ ಆಡುವ ಬಳಗದಲ್ಲಿ ಅವಕಾಶವನ್ನು ಇದೇ ಮೊದಲ ಬಾರಿಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಸೋದರ ಹಾರ್ದಿಕ್ ಪಾಂಡ್ಯ ಜೊತೆಗೆ ಪ್ರಥಮ ಬಾರಿಗೆ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತದ ಆಡುವ ಬಳಗ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm