ಬ್ರೇಕಿಂಗ್ ನ್ಯೂಸ್
25-03-21 10:58 am Source: MYKHEL ಕ್ರೀಡೆ
ಬೆಂಗಳೂರು: 2020ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ. ಈ ಬಾರಿ ಸಿಎಸ್ಕೆಗೆ ಆರಿಸಲ್ಪಟ್ಟಾಗ ತಂಡದ ನಾಯಕ ಎಂಎಸ್ ಧೋನಿ ಹೇಳಿದ ಮಾತನ್ನು ಉತ್ತಪ್ಪ ಸ್ಮರಿಸಿಕೊಂಡಿದ್ದಾರೆ.
2017ರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಎಂಎಸ್ ಧೋನಿ ನಾಯಕರಾಗಿದ್ದಾಗ ರಾಬಿನ್ ಉತ್ತಪ್ಪ ಕೂಡ ತಂಡದಲ್ಲಿದ್ದರು. ಹೀಗಾಗಿ ಮತ್ತೆ ಸಿಎಸ್ಕೆ ನಾಯಕತ್ವದ ತಂಡ ಸೇರಿಕೊಂಡ ಬಗ್ಗೆ ಉತ್ತಪ್ಪ ಮಾತನಾಡಿದ್ದಾರೆ. ತಂಡ ಸೇರಿದ ಕೂಡಲೇ ಧೋನಿ ಹೇಳಿದ್ದೇನೆಂದು ಇಎಸ್ಪಿಎನ್ ಕ್ರಿಕ್ಇನ್ಫೋ ಜೊತೆ ಉತ್ತಪ್ಪ ಹೇಳಿಕೊಂಡಿದ್ದಾರೆ. 'ನನಗೆ ಕರೆ ಮಾಡಿದ ಧೋನಿ, ನಿನ್ನನ್ನು ಈ ತಂಡಕ್ಕೆ ಕರೆತರುವಲ್ಲಿ ನನ್ನ ನಿರ್ಧಾರವೇನಿಲ್ಲ. ಇದನ್ನು ನಿನಗೆ ನಾನು ತಿಳಿಸಬಯಸುತ್ತೇನೆ. ಅದು ನಮ್ಮ ಲೀಡರ್ಶಿಪ್ ಗುಂಪಿನ ನಿರ್ಧಾರ. ನಿನ್ನ ಸ್ವಂತ ಸಾಮರ್ಥ್ಯ, ಕೌಶಲಗಳೊಂದಿಗೆ ನಿನ್ನನ್ನು ತಂಡಕ್ಕೆ ಸೇರಿಸಿಕೊಳ್ಳಲು ಬಯಸಿದ್ದೆ. ಹೀಗಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ಎಲ್ಲರಲ್ಲೂ ಹೇಳಿದ್ದೆ. ಯಾಕೆಂದರೆ ಧೋನಿ ಇದ್ದಿದ್ದಕ್ಕೆ ನಿನ್ನನ್ನು ಸಿಎಸ್ಕೆಗೆ ಆರಿಸಲಾಯ್ತು ಅನ್ನೋ ಮಾತು ನಾಳೆ ಬರಬಾರದು ಅಲ್ವಾ?' ಎಂದು ಧೋನಿ ಹೇಳಿರುವುದಾಗಿ ಉತ್ತಪ್ಪ ತಿಳಿಸಿದ್ದಾರೆ.
ಮಾತು ಮುಂದುವರೆಸಿದ ಉತ್ತಪ್ಪ, 'ಪ್ರಾಮಾಣಿಕತೆ ಇದ್ದವರಲ್ಲಿ ಈ ನಡೆ ಅದ್ಭುತವಾದುದು ಅಲ್ಲವೆ? ನಾನು ಖಂಡಿತವಾಗಿಯೂ ಇದನ್ನು ಮೆಚ್ಚಿಕೊಳ್ಳುತ್ತೇನೆ. ನನ್ನ ಸ್ವಂತ ಕೌಶಲ್ಯದಿಂದ, ನನ್ನ ಸ್ವಂತ ವಿಶ್ವಾಸಾರ್ಹತೆಯಿಂದ ನಾನು ಸಿಎಸ್ಕೆಗೆ ಬಂದಿದ್ದೇನೆ ಅನ್ನೋದು ನನಗೆ ಗೊತ್ತು. ಇದೇ ಕಾರಣಕ್ಕೆ ನಾನು ಧೋನಿಯನ್ನು ಪ್ರೀತಿಸುತ್ತೇನೆ,' ಎಂದಿದ್ದಾರೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm