ಬ್ರೇಕಿಂಗ್ ನ್ಯೂಸ್
26-03-21 02:38 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ಮಾತ್ರವೇ ಭಾರತ ತಂಡ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡು ಹೊರಬಿದ್ದಿರುವ ಶ್ರೇಯಸ್ ಐಯ್ಯರ್ ಸ್ಥಾನಕ್ಕೆ ರಿಷಭ್ ಪಂತ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸುದೀರ್ಘ 437 ದಿನಗಳ ನಂತರ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ರಿಷಭ್ ಪಂತ್. ಪಂತ್ ಕೊನೆಯ ಬಾರಿ 2020ರ ಜನವರಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಏಕದಿನ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದಿದ್ದರು.
ಬಳಇಕ ರಿಷಭ್ ಪಂತ್ ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಏಕದಿನ ತಂಡದಲ್ಲಿದ್ದರು. ಆದರೆ ಆಡುವ ಬಳಗದಲ್ಲಿ ಪಂತ್ ಅವಕಾಶ ಪಡೆದಿರಲಿಲ್ಲ. ಕೆಎಲ್ ರಾಹುಲ್ ಅವರು ವಿಕೆಟ್ ಕೀಪಿಂಗ್ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದರು. ಅದಾದ ನಂತರ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಂತ್ ಸೀಮಿತ ಓವರ್ಗಳ ಸರಣಿಗೆ ಆಯ್ಕೆಯಾಗಿರಲಿಲ್ಲ.
ಪಂತ್ ಬದಲಿಗೆ ಸಂಜು ಸ್ಯಾಮ್ಸನ್ಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಬಳಿಕ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ನೀಡಿದ ಮ್ಯಾಚ್ ವಿನ್ನಿಂಗ್ ಪ್ರದರ್ಶನದಿಂದಾಗಿ ಮತ್ತೆ ಸೀಮತ ಓವರ್ಗಳ ಸರಣಿಗೆ ತನ್ನನ್ನು ಪರಿಗಣಿಸುವಂತೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಜೊತೆಗೆ ಟಿ20 ಹಾಗೂ ಏಕದಿನ ಸ್ಕ್ವಾಡ್ಗೂ ಪಂತ್ ಮರಳಿದರು. ಈಗ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಿಷಭ್ ಪಂತ್ ಈವರೆಗೆ ಭಾರತದ ಪರವಾಗಿ 16 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 374 ರನ್ಗಳಿಸಿದ್ದು 103.6ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ್ದಾರೆ. 2020ರಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಸೀಮಿತ ಓವರ್ಗಳ ಸರಣಿಗೆ ಬಂದಿದ್ದಾಗ ಪಂತ್ ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದರು.
ಭಾರತ ಪ್ಲೇಯಿಂಗ್ XI ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm