ಬ್ರೇಕಿಂಗ್ ನ್ಯೂಸ್
26-03-21 02:38 pm Source: MYKHEL ಕ್ರೀಡೆ
ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಕೇವಲ ಒಂದು ಬದಲಾವಣೆಯನ್ನು ಮಾತ್ರವೇ ಭಾರತ ತಂಡ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡು ಹೊರಬಿದ್ದಿರುವ ಶ್ರೇಯಸ್ ಐಯ್ಯರ್ ಸ್ಥಾನಕ್ಕೆ ರಿಷಭ್ ಪಂತ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸುದೀರ್ಘ 437 ದಿನಗಳ ನಂತರ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ ರಿಷಭ್ ಪಂತ್. ಪಂತ್ ಕೊನೆಯ ಬಾರಿ 2020ರ ಜನವರಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಏಕದಿನ ತಂಡದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದಿದ್ದರು.
ಬಳಇಕ ರಿಷಭ್ ಪಂತ್ ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಏಕದಿನ ತಂಡದಲ್ಲಿದ್ದರು. ಆದರೆ ಆಡುವ ಬಳಗದಲ್ಲಿ ಪಂತ್ ಅವಕಾಶ ಪಡೆದಿರಲಿಲ್ಲ. ಕೆಎಲ್ ರಾಹುಲ್ ಅವರು ವಿಕೆಟ್ ಕೀಪಿಂಗ್ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದರು. ಅದಾದ ನಂತರ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಪಂತ್ ಸೀಮಿತ ಓವರ್ಗಳ ಸರಣಿಗೆ ಆಯ್ಕೆಯಾಗಿರಲಿಲ್ಲ.
ಪಂತ್ ಬದಲಿಗೆ ಸಂಜು ಸ್ಯಾಮ್ಸನ್ಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಬಳಿಕ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ನೀಡಿದ ಮ್ಯಾಚ್ ವಿನ್ನಿಂಗ್ ಪ್ರದರ್ಶನದಿಂದಾಗಿ ಮತ್ತೆ ಸೀಮತ ಓವರ್ಗಳ ಸರಣಿಗೆ ತನ್ನನ್ನು ಪರಿಗಣಿಸುವಂತೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಜೊತೆಗೆ ಟಿ20 ಹಾಗೂ ಏಕದಿನ ಸ್ಕ್ವಾಡ್ಗೂ ಪಂತ್ ಮರಳಿದರು. ಈಗ ಏಕದಿನ ಆಡುವ ಬಳಗದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಿಷಭ್ ಪಂತ್ ಈವರೆಗೆ ಭಾರತದ ಪರವಾಗಿ 16 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಇದರಲ್ಲಿ 374 ರನ್ಗಳಿಸಿದ್ದು 103.6ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ್ದಾರೆ. 2020ರಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ಸೀಮಿತ ಓವರ್ಗಳ ಸರಣಿಗೆ ಬಂದಿದ್ದಾಗ ಪಂತ್ ಕೊನೆಯ ಬಾರಿ ಏಕದಿನ ಪಂದ್ಯವನ್ನು ಆಡಿದ್ದರು.
ಭಾರತ ಪ್ಲೇಯಿಂಗ್ XI ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ
This News Article Is A Copy Of MYKHEL
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm