ಬ್ರೇಕಿಂಗ್ ನ್ಯೂಸ್
27-03-21 05:02 pm Source: MYKHEL ಕ್ರೀಡೆ
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದು 2019ರ ನವೆಂಬರ್ನಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ. ಇನ್ನು ಏಕದಿನ ಪಂದ್ಯದ ವಿಚಾರಕ್ಕೆ ಬಂದರೆ 2019ರ ಮಾರ್ಚ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಶತಕ ಅಂತಾರಾಷ್ಟ್ರೀಯ ಏಕದಿನ ಪಂದ್ಯದ ಕೊನೆಯ ಶತಕವಾಗಿದೆ.
ಇದಾದ ಬಳಿಕ ವಿರಾಟ್ ಕೊಹ್ಲಿ ಶತಕವನ್ನು ಬಾರಿಸುವಲ್ಲಿ ಪದೇಪದೆ ವಿಫಲರಾಗುತ್ತಿದ್ದಾರೆ. 70 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿ ಅವರು 71ನೇ ಶತಕವನ್ನು ಯಾವಾಗ ಬಾರಿಸುತ್ತಾರೆ ಎಂದು ವಿರಾಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ವಿರಾಟ್ 71ನೇ ಅಂತಾರಾಷ್ಟ್ರೀಯ ಶತಕ ಬಾರಿಸುವ ಸಮಯ ಇನ್ನೂ ಬಂದೇ ಇಲ್ಲ. ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸಲಿದ್ದಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯುಂಟಾಯಿತು. 66 ರನ್ ಗಳಿಸಿ ಪೆವಿಲಿಯನ್ ಕಡೆಗೆ ವಿರಾಟ್ ಪಯಣ ಬೆಳೆಸಿದರು.
ಪಂದ್ಯ ಮುಗಿದ ಬಳಿಕ ವಿರಾಟ್ ಶತಕ ಬಾರಿಸಲು ಪದೇಪದೆ ವಿಫಲವಾಗುತ್ತಿರುವ ವಿಷಯದ ಕುರಿತು ಮಾತನಾಡಿದ್ದಾರೆ. ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
ನನ್ನ ವೃತ್ತಿ ಜೀವನದಲ್ಲಿ ನಾನು ಯಾವತ್ತೂ ವೈಯಕ್ತಿಕವಾಗಿ ಶತಕ ಬಾರಿಸಬೇಕು ಎಂದು ಆಟವಾಡಿಲ್ಲ , ಯಾವಾಗಲೂ ನಾನು ನನ್ನ ತಂಡಕ್ಕೋಸ್ಕರ ಮಾತ್ರ ಬ್ಯಾಟ್ ಮಾಡುತ್ತೇನೆ ಎಂದಿದ್ದಾರೆ ಕೊಹ್ಲಿ. ಒಂದು ವೇಳೆ ನಾನು ಶತಕ ಬಾರಿಸಿ ನನ್ನ ತಂಡ ಸೋತರೆ ಪ್ರಯೋಜನವೇನು , ಕ್ರಿಕೆಟ್ ಜೀವನ ಮುಗಿದ ನಂತರ ರನ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ, ತಂಡಕ್ಕೆ ಹೇಗೆ ಆಟ ಆಡಿದ್ದೇವೆ ಎನ್ನುವುದು ಮಾತ್ರ ಉಳಿದುಕೊಳ್ಳುತ್ತದೆ ಎಂದು ಕೊಹ್ಲಿ ಅವರು ಪ್ರತಿಕ್ರಿಯಿಸಿದರು.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm