ಬ್ರೇಕಿಂಗ್ ನ್ಯೂಸ್
29-03-21 11:08 am Source: MYKHEL ಕ್ರೀಡೆ
ಈ ಕ್ರಿಕೆಟ್ ಋತು ಜೀವನವಿಡೀ ನೆನಪಿನಲ್ಲಿಟ್ಟುಕೊಳ್ಳುವಂತಾ ಋತು ಎಂದು ಭಾರತದ ಮುಖ್ಯ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಬಯೋ ಬಬಲ್ನಂತಾ ಕಠಿಣ ವಾತಾವರಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಟೆಸ್ಟ್ ಸರಣಿ ಗೆಲುವು ಹಾಗೂ ಇಂಗ್ಲೆಂಡ್ ವಿರುದ್ಧದ ಮೂರು ಮಾದರಿಯಲ್ಲೂ ಭಾರತದ ಸರಣಿ ಗೆಲುವಿನ ಸಾಧನೆಯನ್ನು ದೃಷ್ಟಿಯಲ್ಲಿಟ್ಟು ಈ ಮಾತುಗಳನ್ನು ಆಡಿದ್ದಾರೆ ರವಿ ಶಾಸ್ತ್ರಿ.
"ಅಭಿನಂದನೆಗಳು ಟ್ರೋಫಿಯನ್ನು ಎತ್ತಿ ಹಿಡಿದಿರುವುದಕ್ಕಾಗಿ. ವಿಶ್ವದ ಎರಡು ಅತ್ಯುತ್ತಮ ತಂಡಗಳ ವಿರುದ್ಧ ಎಲ್ಲಾ ಮಾದರಿಯಲ್ಲಿ ಕಠಿಣ ಸಮಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜೀವಮಾನದ ಋತುವನ್ನು ಹೊಂದಿದ್ದೀರಿ. ಅಭಿನಂದನೆಗೆ ನೀವು ಅತ್ಯಂತ ಅರ್ಹರು" ಎಂದು ಶಾಸ್ತ್ರಿ ಆಟಗಾರರನ್ನು ಪ್ರಶಂಸಿಸಿದ್ದಾರೆ.
ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಈ ಹಿಂದೆ ಹಲವು ಬಾರಿ ಬಯೋಬಬಲ್ನಲ್ಲಿದ್ದು ಆಡುವ ಒತ್ತಡದ ಬಗ್ಗೆ ಪ್ರಸ್ತಾಪವನ್ನು ಮಾಡಿದ್ದರು. ಈಗ ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಟ್ವೀಟ್ ಮಾಡಿ ಭಾರತೀಯ ಆಟಗಾರರ ಪರವಾಗಿ ಹೊಗಳಿಕೆಯ ಮಾತುಗಳನ್ನು ಆಡಿದ್ದಾರೆ. ಭಾರತದ ಬಹುಪಾಲು ಆಟಗಾರರು ಕಳೆದ 7 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಪ್ರವಾಸದ ನಂತರದ ಒಂದು ವಾರವನ್ನು ಹೊರತು ಪಡಿಸಿ ಉಳಿದ ಎಲ್ಲಾ ಸಮಯಗಳನ್ನು ಬಯೋಬಬಲ್ನಲ್ಲಿಯೇ ಕಳೆದಿದ್ದಾರೆ.
ಕಳೆದ ಐಪಿಎಲ್ ಆವೃತ್ತಿ ಮುಕ್ತಾವಾಗುತ್ತಿದ್ದಂತೆಯೇ ಭಾರತದ ಬಿಡುವಿಲ್ಲದ ಋತು ಆರಂಭವಾಗಿತ್ತು. ಆರಂಭದಲ್ಲಿ ಏಕದಿನ ಸರಣಿ ಆಸ್ಟ್ರೇಲಿಯಾಗೆ 1-2 ಅಂತರದಿಂದ ಸೋಲುವ ಮೂಲಕ ಆರಂಭವಾಯಿತು. ಆದರೆ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿದ ಭಾರತ 2-1 ಅಂತರದಿಂದ ಗೆಲುವು ಸಾಧಿಸಿತು. ಅದಾದ ಬಳಿಕ ಬಹು ನಿರೀಕ್ಷಿತ ಟೆಸ್ಟ್ ಸರಣಿ ಭಾರತೀಯ ಅಭಿಮಾನಿಗಳ ಪಾಲಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುವಂತಾದ್ದು.
ಮೊದಲ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ಸ್ಟಾರ್ ಆಟಗಾರರ ಅಲಭ್ಯತೆಯ ಮಧ್ಯೆಯೂ ಭಾರತ ತಂಡದ ಆಟಗಾರರು ನೀಡಿದ ಪ್ರದರ್ಶನದಿಂದ ಭಾರತ 2-1 ಅಂತರದಿಂದ ಐತಿಹಾಸಿಕವಾಗಿ ಸರಣಿಯನ್ನು ಗೆದ್ದುಕೊಂಡಿತ್ತು.
ಬಳಿಕ ಭಾರತ ತವರಿನಲ್ಲಿಯೂ ಇದೇ ಪ್ರದರ್ಶನವನ್ನು ಮುಂದುವರಿಸಿದೆ. ಮೊದಲಿಗೆ ಟೆಸ್ಟ್ನಲ್ಲಿ 3-1 ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಬಳಿಕ ಸೀಮಿತ ಓವರ್ಗಳಲ್ಲಿ ಇಂಗ್ಲೆಂಡ್ ಕಠಿಣ ಪೈಪೋಟಿಯನ್ನು ನೀಡಿತಾದರೂ ಭಾರತದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
This News Article Is A Copy Of MYKHEKL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm