ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm