ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
19-05-24 11:54 am
Bangalore Correspondent
Hubballi Anjali Murder, Police DCP P Rajeev:...
19-05-24 10:42 am
Deve Gowda, prajwal Revanna: ಪ್ರಜ್ವಲ್ ರೇವಣ್ಣ...
18-05-24 10:01 pm
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
19-05-24 04:30 pm
HK News Desk
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
19-05-24 10:11 pm
Mangalore Correspondent
Case against MLA Harish Poonja in Belthangady...
19-05-24 08:56 pm
Belthangady Harish Poonja, Case: ಯುವಮೋರ್ಚಾ ಮು...
19-05-24 08:36 pm
MLC Bhoje Gowda in Mangalore: ಎಸ್ಸೆಸ್ಸೆಲ್ಸಿ ಪ...
19-05-24 04:11 pm
Dr Dhananjay Sarji in Mangalore, Vidhan Paris...
19-05-24 03:34 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm