ಬ್ರೇಕಿಂಗ್ ನ್ಯೂಸ್
30-03-21 11:31 am Source: MYKHEL ಕ್ರೀಡೆ
ವಿಂಡ್ ಸರ್ಫಿಂಗ್ ವಿಭಿನ್ನವಾದ ಕ್ರೀಡಾ ಪ್ರಾಕಾರ. ಭಾರತದಲ್ಲಿ ಪುರುಷರು ಹೆಚ್ಚಿನ ಪ್ರಾಭಲ್ಯವನ್ನು ಹೊಂದಿರುವ ಕ್ರೀಡೆಯಿದು. ಸಾಕಷ್ಟು ಪರಿಣತಿ ಹಾಗೂ ಮನೋಸ್ಥೈರ್ಯವಿದ್ದರೆ ಮಾತ್ರ ಇದ್ರಲ್ಲಿ ಯಶಸ್ಸು ಗಳಿಸಲು ಸಾಧ್ಯ. ಆದರೆ ತಮಿಳುನಾಡು ಮೂಲಕ ಐಶ್ವರ್ಯ ಗಣೇಶ್ ಏಕಾಂಗಿಯಾಗಿ ವಿಂಡ್ ಸರ್ಫಿಂಗ್ ಕಲಿತು ಮೂರು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಲ್ಲದೆ ಈಗ ಒಲಿಂಪಿಕ್ಸ್ನಲ್ಲಿ ಭಾಗಿಯಾಗುವ ಕನಸು ಹೊತ್ತಿದ್ದಾರೆ.
ಐಶ್ವರ್ಯ ಗಣೇಶ್ ಮೊದಲಿಗೆ ಸೈಲಿಂಗ್(ಹಾಯಿದೋಣಿ) ತರಬೇತಿಗಾಗಿ ಎರಡು ದಶಕಗಳಿಂದ ಸೈಲಿಂಗ್ ತರಬೇತಿ ನೀಡುತ್ತಿರುವ ಡಿಪಿ ಸೆಲ್ವಂ ಅವರೊಂದಿಗೆ ಸೇರಿಕೊಂಡಿದ್ದರು. 2014ರಿಂದ 2017ರವರೆಗೆ ಸೈಲಿಂಗ್ ಅಭ್ಯಾಸವನ್ನು ಪಡೆದುಕೊಂಡಿದ್ದರು. ಆದರೆ ಐಶ್ವರ್ಯ ಗಣೇಶ್ ಸೈಲಿಂಗ್ ಜೊತೆಗೆ ವಿಂಡ್ ಸರ್ಫಿಂಗ್ ಕಡೆಗೆ ವಾಲಿದರು. ಚೆನ್ನೈ ಸಮುದ್ರದದಲ್ಲಿ ಸೈಲಿಂಗ್ ಸಹಪಾಠಿಗಳ ಜೊತೆಗೆ ವಿಂಡ್ ಸರ್ಫಿಂಗ್ ಅಭ್ಯಾಸವನ್ನು ಮಾಡತೊಡಗಿದರು.
ಆದರೆ ಈ ಸಂದರ್ಭದಲ್ಲಿ ಐಶ್ವರ್ಯಗೆ ವಿಂಡ್ ಸರ್ಫಿಂಗ್ಗೆ ಯಾವುದೇ ತಜ್ಞರು ಇರಲಿಲ್ಲ. ಯೂಟ್ಯೂಬ್ನಲ್ಲಿಯೇ ಕೆಲ ವಿಡಿಯೋಗಳನ್ನು ನೋಡಿಕೊಂಡು ವಿಂಡ್ ಸರ್ಫಿಂಗ್ನ ಚಾಕಚಕ್ಯತೆಯನ್ನು ಅಭ್ಯಾಸ ಮಾಡಲು ಆರಂಭಿಸಿದರು. ಸೈಲಿಂಗ್ನ ಜೊತೆಗೆ ವಿಂಡ್ ಸರ್ಫಿಂಗ್ನಲ್ಲಿಯೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಾ ಪ್ರಶಸ್ತಿ ಗಳಿಸಲು ಆರಂಭಿಸಿದರು.
"ಸೈಲ್ ಬೋಟ್ನಲ್ಲಿ ಮಾಸ್ಟರ್ ಆಗಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳಿಸಲು ಸಾಮಾನ್ಯವಾಗಿ ಮೂರರಿಂದ ನಾಲ್ಕು ವರ್ಷಗಳು ಬೇಕಾಗುತ್ತದೆ. ಆದರೆ ಐಶ್ವರ್ಯ ಮೊದಲ ವರ್ಷದಲ್ಲಿಯೇ ಜೂನಿಯರ್ ಕ್ಲಾಸ್ನಿಂದ ಯೂತ್ ಕ್ಲಾಸ್ಗೆ ಬಂದು ಬಳಿಕ ಮರು ವರ್ಷವೇ ಸೀನಿಯರ್ ಕ್ಲಾಸ್ ಕೂಡ ಪೂರ್ಣಗೊಳಿಸುವುದರ ಜೊತೆಗೆ ಎಲ್ಲಾ ವಿಂಡ್ ಸರ್ಫಿಂಗ್ ಪ್ರಶಸ್ತಿಗಳನ್ನು ಕೂಡ ಗಳಿಸಿಕೊಂಡಿದ್ದಾರೆ" ಎಂದು ಐಶ್ವರ್ಯ ಗಣೇಶ್ ಅವರ ಕೋಚ್ ಡಿಪಿ ಸೆಲ್ವಂ ಹೆಮ್ಮೆ ವ್ಯಕ್ತಪಡಿಸುತ್ತಾರೆ.
ಭಾರತದಲ್ಲಿ ಪುರುಷರೇ ಪ್ರಾಬಲ್ಯವನ್ನು ಹೊಂದಿರುವ ವಿಂಡ್ ಸರ್ಫಿಂಗ್ನಲ್ಲಿ ಐಶ್ವರ್ಯ ಗಣೇಶ್ ವಿಶೇಷ ಸಾಧನೆಯನ್ನು ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಐಶ್ವರ್ಯ ಗಣೇಶ್ ರಾಷ್ಟ್ರೀಯ ವಿಂಡ್ ಸರ್ಫಿಂಗ್ನಲ್ಲಿ ಚಾಂಪಿಯನ್ ಆಗಿದ್ದಾರೆ. ಈಗ ಒಮಾನ್ನಲ್ಲಿದ್ದು ಮುಸ್ಸನ್ಹಾ ಓಪನ್ ಚಾಂಪಿಯನ್ಶಿಪ್ ಇವೆಂಟ್ನಲ್ಲಿ ಪಾಲ್ಗೊಂಡಿದ್ದು ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಗಳಿಸುವ ನಿರೀಕ್ಷೆಯಲ್ಲಿದ್ದಾರೆ.
This News Article Is A Copy Of MYKHEL
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm