ಬ್ರೇಕಿಂಗ್ ನ್ಯೂಸ್
01-04-21 12:59 pm Source: MYKHEL ಕ್ರೀಡೆ
ಟೀಮ್ ಇಂಡಿಯಾದ ಅನುಭವಿ ವೇಗಿ ಇಶಾಂತ್ ಶರ್ಮಾ ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ನಲ್ಲಿ 100ನೇ ಪಂದ್ಯವನ್ನು ಆಡಿದ್ದಾರೆ. ಈ ಮೂಲಕ ಟೆಸ್ಟ್ ಸ್ಪೆಶಲಿಸ್ಟ್ ವಿಶೇದ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ವೇಗಿ ಮತ್ತಷ್ಟು ಕಾಲ ಭಾರತ ಟೆಸ್ಟ್ ತಂಡದಲ್ಲಿದ್ದು ಕೊಡುಗೆಯನ್ನು ನೀಡಬೇಕು ಎಂದು ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ. ಅಮಿತ್ ಮಿಶ್ರಾ ಹಾಗೂ ಇಶಾಂತ್ ಶರ್ಮಾ ಇಬ್ಬರೂ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸದಸ್ಯರಾಗಿದ್ದಾರೆ.
ಈ ಸಂದರ್ಭದಲ್ಲಿ ಇಶಾಂತ್ ಶರ್ಮಾ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವುದನ್ನು ನೋಡಲು ಬಯಸುತ್ತೇನೆ ಎಂದು ಅಮಿತ್ ಮಿಶ್ರಾ ಹೇಳಿದ್ದಾರೆ.
ಚಾಹಲ್ "ಭಾರತೀಯ ತಂಡದಲ್ಲಿ ನಾನು ಹಾಗೂ ಇಶಾಂತ್ ಶರ್ಮಾ ಹಲವು ಬಾರಿ ಜೊತೆಯಾಗಿ ಆಡಿದ್ದೇವೆ. ಆತ ಈಗ 100 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅದಕ್ಕಾಗಿ ನಾನು ಆತನನ್ನು ಅಭಿನಂದಿಸುತ್ತೇನೆ. ಆತ ಮತ್ತಷ್ಟು ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ನಾನು ಬಯಸುತ್ತೇನೆ. ಆತ ಕನಿಷ್ಟ 150 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು" ಎಂದಿದ್ದಾರೆ ಮಿಶ್ರಾ. ಇಶಾಂತ್ ಶರ್ಮಾ ಇತ್ತೀಚೆಗೆ ಅಂತ್ಯವಾದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದರು.
32ರ ಹರೆಯದ ಇಶಾಂತ್ ಶರ್ಮಾ 101 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು 303 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಒಂದು ಬಾರಿ 10 ವಿಕೆಟ್ಗಳ ಗೊಂಚಲು ಪಡೆದಿರುವ ಇಶಾಂತ್ 11 ಬಾರಿ ಐದು ವಿಕೆಟ್ಗಳ ಗೊಂಚಲು ಪಡೆದುಕೊಂಡಿದ್ದಾರೆ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಈ ಬಾರಿಯ ಆವೃತ್ತಿಯಲ್ಲಿ ಹೊಸ ನಾಯಕನ ನೇತೃತ್ವದಲ್ಲಿ ಆಡಲಿದೆ. ರಿಷಭ್ ಪಂತ್ಗೆ ಇದೇ ಮೊದಲ ಬಾರಿಗೆ ಐಪಿಎಲ್ನಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm