ಬ್ರೇಕಿಂಗ್ ನ್ಯೂಸ್
01-04-21 01:33 pm Source: MYKHEL Madhukara Shetty ಕ್ರೀಡೆ
ಈ ಬಾರಿಯ ಐಪಿಎಲ್ ಆರಂಭಕ್ಕೆ ಈಗ ಉಳಿದಿರುವುದು ಬೆರಳೆಣಿಕೆಯ ದಿನಗಳು ಮಾತ್ರ. ಆದರೆ ಅಂತಿಮ ಕ್ಷಣದಲ್ಲಿ ಕೆಲ ಆಟಗಾರರು ಹಿಂದಕ್ಕೆ ಸರಿಯುವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜಲ್ವುಡ್ ಗುರುವಾರ ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಕಟಿಸಿದರು. ಜೋಶ್ ಹ್ಯಾಜಲ್ವುಡ್ ಇದಕ್ಕೆ ಬಯೋಬಬಲ್ನ ಕಾರಣವನ್ನು ನೀಡಿದ್ದಾರೆ. ಆದರೆ ಭಾರತೀಯ ಕ್ರಿಕೆಟ್ ಪ್ರೇಮಿಗಳು ಬೇರೆಯದ್ದೇ ಕಾರಣವನ್ನು ಹುಡುಕಿದ್ದು ಟ್ವಿಟ್ಟರ್ನಲ್ಲಿ ತಮಾಷೆ ಮಾಡುತ್ತಾ ಕಾಲೆಳೆದಿದ್ದಾರೆ.
ಜೋಶ್ ಹ್ಯಾಜಲ್ವುಡ್ ಗುರುವಾರ ಮುಂಜಾನೆ ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಭಾರತದ ಟೆಸ್ಟ್ ಕ್ರಿಕೆಟಿಗ ಚೇತೇಶ್ವರ್ ಪೂಜಾರ ಟ್ರೆಂಡ್ ಆಗಿದ್ದರು. ಜೋಶ್ ಹ್ಯಾಜಲ್ವುಡ್ ಘೋಷಣೆಗೂ ಇದಕ್ಕೂ ಸಂಬಂಧ ಏನಿದೆ ಎನ್ನಿಸಿದರೂ ನೆಟ್ಟಿಗರು ಪೂಜಾರ ಅವರೇ ಹ್ಯಾಜಲ್ವುಡ್ ಅವರ ಈ ನಿರ್ಧಾರಕ್ಕೆ ಕಾರಣ ಎಂದು ಟ್ರಾಲ್ ಮಾಡಲು ಆರಂಭಿಸಿದರು.
ಕಳೆದ ಭಾರತದ ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಟೀಮ್ ಇಂಡಿಯಾ ಪರವಾಗಿ ಆಡಲಿಳಿದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಅತ್ಯಂತ ನಿಧಾನಗತಿಯ ಬ್ಯಾಟಿಂಗ್ನಿಂದ ಎದುರಾಳಿ ಆಸಿಸ್ ಬೌಲರ್ಗಳಿಗೆ ಕಂಟಕವಾಗಿದ್ದರು. ಭಾರತೀಯ ಬ್ಯಾಟ್ಸ್ಮನ್ ಪೂಜಾರಾಗೆ ಚೆಂಡೆಸೆದು ಆಸಿಸ್ ಬೌಲರ್ಗಳು ಹತಾಶರಾಗಿರುವುದನ್ನು ಸ್ವತಃ ಆಸ್ಟ್ರೇಲಿಯಾ ಬೌಲರ್ಗಳೆ ಹಲವು ಬಾರಿ ಹೇಳಿಕೊಂಡಿದ್ದರು. ಈ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದು ಬೀಗಿತ್ತು. ಈಗ ಐಪಿಎಲ್ನಲ್ಲಿ ಜೋಶ್ ಹ್ಯಾಜಲ್ವುಡ್ ಹಾಗೂ ಚೇತೇಶ್ವರ್ ಪೂಜಾರ ಒಂದೇ ತಂಡದಲ್ಲಿ ಆಡಬೇಕಿತ್ತು. ಚೇತೇಶ್ವರ್ ಪೂಜಾರ ಹಾಗೂ ಜೋಶ್ ಹ್ಯಾಜಲ್ವುಡ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಣಕ್ಕಿಳಿಯಲಿದ್ದರು. ಆದರೆ ನೆಟ್ನಲ್ಲಿ ಚೇತೇಶ್ವರ್ ಪೂಜಾರಾಗೆ ತಾನು ಬೌಲಿಂಗ್ ಮಾಡಬೇಕು ಎಂಬ ಕಾರಣಕ್ಕೆ ಆತಂಕದಿಂದ ಹ್ಯಾಜಲ್ವುಡ್ ಐಪಿಎಲ್ನಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.
ಕಳೆದ ಹಲವು ವರ್ಷಗಳಿಂದ ಐಪಿಎಲ್ ಹರಾಜಿನಲ್ಲಿ ಬಿಕರಿಯಾಗದೆ ಉಳಿದುಕೊಳ್ಳುತ್ತಿದ್ದ ಚೇತೇಶ್ವರ್ ಪೂಜಾರ ಈ ಬಾರಿ ಮೂಲ ಬೆಲೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದರು. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೊತೆಗೆ ನೆಟ್ ಅಭ್ಯಾಸದಲ್ಲಿ ತೊಡಗಿರುವ ಪೂಜಾರ ಟೂರ್ನಿಗೆ ಸಿದ್ಧರಾಗುತ್ತಿದ್ದಾರೆ.
This News Article Is A Copy Of MYKHEL
Josh Hazlewood when he heard he had to bowl to Pujara in IPL 2021 pic.twitter.com/dE5QvAYtKT
— 𝐉.𝐈.𝐓.🚩 (@JitRo45) April 1, 2021
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm