ಬ್ರೇಕಿಂಗ್ ನ್ಯೂಸ್
02-04-21 01:39 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ವೇಗಿ ಟಿ ನಟರಾಜನ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಮಿಂಚಿದ್ದರು. ಈ ಮೂಲಕ ಆಸಿಸ್ ವಿರುದ್ಧ ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ನಟರಾಜನ್ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರದರ್ಶನದ ಕಾರಣಕ್ಕೆ ಟಿ ನಟರಾಜನ್ ಸಹಿತ ಆರು ಯುವ ಆಟಗಾರರಿಗೆ ಉದ್ಯಮಿ ಆನಂದ್ ಮಹೀಂದ್ರಾ ಹೊಸ ಮಾದರಿಯ ಥಾರ್ ಎಸ್ಯುವಿ ಕಾರ್ಗಳನ್ನು ಉಡುಗೊರೆಯಾಗಿ ನೀಡಿದ್ದರು.
ಈ ಉಡುಗೊರೆಯಾಗಿ ದೊರೆತ ಕಾರನ್ನು ಟಿ ನಟರಾಜನ್ ತಾವು ಇಟ್ಟುಕೊಳ್ಳದೆ ತಮ್ಮ ಮೆಂಟರ್ ಜಯಪ್ರಕಾಶ್ ಅವರಿಗೆ ನೀಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ತೀಕ್ಷ್ಣವಾದ ಯಾರ್ಕರ್ಗಳ ಮೂಲಕ ಅದ್ಭುತ ಯಶಸ್ಸು ಸಾಧಿಸಿ ಆಸಿಸ್ ಪ್ರವಾಸಕ್ಕೆ ಆಯ್ಕೆಯಾಗದ ನಟರಾಜನ್ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅದ್ಭುತವಾದ ಪ್ರದರ್ಶನ ನಿಡುವಲ್ಲಿ ಯಶಸ್ವಿಯಾದರು.
ಟಿ ನಟರಾಜನ್ ತಮ್ಮ ಈ ಸಾಧನೆಗೆ ಮೆಂಟರ್ ಜಯಪ್ರಕಾಶ್ ಅವರ ಕೊಡುಗೆಯನ್ನು ಈ ಹಿಂದೆ ಹಲವು ಸಂದರ್ಭಗಳಲ್ಲಿ ನೆನಪಿಸಿಕೊಂಡಿದ್ದರು. ಬಡತನದಿಂದ ಬೆಳೆದು ಬಂದ ನಟರಾಜನ್ ಅವರ ಕುಟುಂಬವನ್ನು ಒಪ್ಪಿಸಿ ಪೂರ್ಣ ಪ್ರಮಾಣದಲ್ಲಿ ಕ್ರಿಕೆಟನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಲು ಜಯಪ್ರಕಾಶ್ ಕಾರಣರಾಗಿದ್ದರು. ಅಲ್ಲದೆ ನಟರಾಜನ್ ಅವರ ಬೆಳವಣಿಗೆಗೆ ಸಹಕಾರಿಯಾಗಿ ನಿಂತರು.
ಜಯಪ್ರಕಾಶ್ ಅವರ ಈ ಬೆಂಬಲಕ್ಕೆ ನಟರಾಜನ್ ಜರ್ಸಿಯಲ್ಲಿ ತಮ್ಮ ಹೆಸರಿನ ಮುಂದೆ 'JP' ಎಂದು ಬರೆದು ಗೌರವವನ್ನು ಸಲ್ಲಿಸುತ್ತಿದ್ದಾರೆ. ಅಲ್ಲದೆ ನಟರಾಜನ್ ಅವರ ಎಡ ಮೊಣಕೈಯ್ಯಲ್ಲಿ JP ಎಂಬ ಟ್ಯಾಟೂವನ್ನು ಹಾಕಿಕೊಂಡು ತನ್ನ ಮೆಂಟರ್ಗೆ ವಿಶೇಷ ಸ್ಥಾನವನ್ನು ನೀಡಿದ್ದಾರೆ.
ಈಗ ನಟರಾಜನ್ ತನಗೆ ಉಡುಗೊರೆಯಾಗಿ ದೊರೆತ ಕಾರನ್ನು ತನ್ನ ಗುರು ಹಾಗೂ ಹಿತೈಷಿ ಜಯಪ್ರಕಾರ್ಅವರಿಗೆ ನೀಡುವ ಮೂಲಕ ಗೌರವವನ್ನು ಸಲ್ಲಿಸಿದ್ದಾರೆ ಟಿ ನಟರಾಜನ್. ಈ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆಲ್ಲುವಂತಾ ನಿರ್ಧಾರ ತೆಗೆದುಕೊಂಡಿದ್ದಾರೆ.
This News Article Is A Copy Of MYKHEL
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm