ಬ್ರೇಕಿಂಗ್ ನ್ಯೂಸ್
02-04-21 06:25 pm Source: MYKHEL ಕ್ರೀಡೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ ನಿಜ. ಆದರೆ ಹಿಂದಿನ ಸೀಸನ್ಗಳಲ್ಲಿನ ತಪ್ಪುಗಳನ್ನು ತಿದ್ದಿಕೊಂಡರೆ, ತಂಡದ ಬಲಿಷ್ಠ ಆಟಗಾರರೆಲ್ಲ ಜವಾಬ್ದಾರಿಯುತ ಪ್ರದರ್ಶನ ನೀಡಲಾರಂಭಿಸಿದರೆ ಆರ್ಸಿಬಿ ಈ ವರ್ಷ ಖಂಡಿತಾ ಕಪ್ ಗೆಲ್ಲಲು ಅವಕಾಶವಿದೆ.
ಏಪ್ರಿಲ್ 9ರಂದು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಈ ಸೀಸನ್ನ ಚೊಚ್ಚಲ ಪಂದ್ಯದಲ್ಲೇ ಆರ್ಸಿಬಿ ಶುಭಾರಂಭ ಕಂಡರೆ ಆರ್ಸಿಬಿಯ ಆತ್ಮವಿಶ್ವಾಸ ಹೆಚ್ಚಾಗಲಿದೆ. ಅದು ಟ್ರೋಫಿ ಗೆಲ್ಲಲು ನಾಂದಿಯಾಗಲಿದೆ.
ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ವಿಜಯ ಪತಾಕೆ ಹಾರಿಸಲು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ಬ್ರಾಡ್ ಹಾಗ್ ಬಲಿಷ್ಠ ಪ್ಲೇಯಿಂಗ್ XI ಪ್ರಕಟಿಸಿದ್ದಾರೆ.

ಆರಂಭಿಕ ಬ್ಯಾಟ್ಸ್ಮನ್ಗಳು
ಈ ಬಾರಿ ಆರ್ಸಿಬಿಯಲ್ಲಿ ಕಾಣಲಿರುವ ಪ್ರಮುಖ ಬದಲಾವಣೆಯೆಂದರೆ ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಡುತ್ತಿದ್ದಾರೆ. ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ಪರ ಕೊಹ್ಲಿ ಮತ್ತು ಪ್ರತಿಭಾನ್ವಿತ ಆಟಗಾರ ದೇವದತ್ ಪಡಿಕ್ಕಲ್ ಆರಂಭಿಕರಾಗಿ ಆಡೋದು ಬಹುತೇಕ ಖಚಿತ. ಬ್ರಾಡ್ ಹಾಗ್ ನೆಚ್ಚಿನ ಪ್ಲೇಯಿಂಗ್ XIನಲ್ಲೂ ಕೊಹ್ಲಿ-ಪಡಿಕ್ಕಲ್ ಆರಂಭಿಕರಾಗಿ ಹೆಸರಿಸಲ್ಪಟ್ಟಿದ್ದಾರೆ.

ಬೆಸ್ಟ್ ಮಿಡ್ಲ್ ಆರ್ಡರ್
ಮೊದಲ ಐಪಿಎಲ್ ಪಂದ್ಯಕ್ಕೆ ಹಾಗ್ ಹೆಸರಿಸಿರುವ ಪ್ಲೇಯಿಂಗ್ XIನಲ್ಲಿ ಮಿಸ್ಟರ್ 360 ಡಿಗ್ರೀ ಖ್ಯಾತಿಯ ಎಬಿ ಡಿ ವಿಲಿಯರ್ಸ್, ಸ್ಪೋಟಕ ಬ್ಯಾಟ್ಸ್ಮನ್ ಗಳಾದ ಗ್ಲೆನ್ ಮ್ಯಾಕ್ಸ್ವೆಲ್, ಡಾನ್ ಕ್ರಿಸ್ಚಿಯನ್ ಮತ್ತು ಮೊಹಮ್ಮದ್ ಅಜರುದ್ದೀನ್ ಕಾಣಿಸಿಕೊಂಡಿದ್ದಾರೆ. ಇದೇ ಪ್ರಕಾರ ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ಪ್ಲೇಯಿಂಗ್ XI ಇದ್ದರೆ ಇದು ನಿಜಕ್ಕೂ ಬಲಿಷ್ಠ ಮಿಡ್ಲ್ ಆರ್ಡರ್ ಬ್ಯಾಟಿಂಗ್ ಅನ್ನಿಸಿಕೊಳ್ಳಲಿದೆ.

ಹಾಗ್ ನೆಚ್ಚಿನ ಆರ್ಸಿಬಿ ತಂಡ
1. ದೇವದತ್ ಪಡಿಕ್ಕಲ್, 2. ವಿರಾಟ್ ಕೊಹ್ಲಿ (ಸಿ), 3. ಎಬಿ ಡಿವಿಲಿಯರ್ಸ್, 4. ಗ್ಲೆನ್ ಮ್ಯಾಕ್ಸ್ ವೆಲ್, 5. ಡಾನ್ ಕ್ರಿಶ್ಚಿಯನ್, 6. ಮೊಹಮ್ಮದ್ ಅಜರುದ್ದೀನ್, 7. ವಾಷಿಂಗ್ಟನ್ ಸುಂದರ್, 8. ಮೊಹಮ್ಮದ್ ಸಿರಾಜ್, 9. ನವದೀಪ್ ಸೈನಿ, 10 ಕೇನ್ ರಿಚರ್ಡ್ಸನ್, 11. ಯುಜುವೇಂದ್ರ ಚಾಹಲ್.
This News Article Is A Copy Of MYKHEL
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm