ಬ್ರೇಕಿಂಗ್ ನ್ಯೂಸ್
02-04-21 06:25 pm Source: MYKHEL ಕ್ರೀಡೆ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ ನಿಜ. ಆದರೆ ಹಿಂದಿನ ಸೀಸನ್ಗಳಲ್ಲಿನ ತಪ್ಪುಗಳನ್ನು ತಿದ್ದಿಕೊಂಡರೆ, ತಂಡದ ಬಲಿಷ್ಠ ಆಟಗಾರರೆಲ್ಲ ಜವಾಬ್ದಾರಿಯುತ ಪ್ರದರ್ಶನ ನೀಡಲಾರಂಭಿಸಿದರೆ ಆರ್ಸಿಬಿ ಈ ವರ್ಷ ಖಂಡಿತಾ ಕಪ್ ಗೆಲ್ಲಲು ಅವಕಾಶವಿದೆ.
ಏಪ್ರಿಲ್ 9ರಂದು ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಈ ಸೀಸನ್ನ ಚೊಚ್ಚಲ ಪಂದ್ಯದಲ್ಲೇ ಆರ್ಸಿಬಿ ಶುಭಾರಂಭ ಕಂಡರೆ ಆರ್ಸಿಬಿಯ ಆತ್ಮವಿಶ್ವಾಸ ಹೆಚ್ಚಾಗಲಿದೆ. ಅದು ಟ್ರೋಫಿ ಗೆಲ್ಲಲು ನಾಂದಿಯಾಗಲಿದೆ.
ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ವಿಜಯ ಪತಾಕೆ ಹಾರಿಸಲು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ಬ್ರಾಡ್ ಹಾಗ್ ಬಲಿಷ್ಠ ಪ್ಲೇಯಿಂಗ್ XI ಪ್ರಕಟಿಸಿದ್ದಾರೆ.
ಆರಂಭಿಕ ಬ್ಯಾಟ್ಸ್ಮನ್ಗಳು
ಈ ಬಾರಿ ಆರ್ಸಿಬಿಯಲ್ಲಿ ಕಾಣಲಿರುವ ಪ್ರಮುಖ ಬದಲಾವಣೆಯೆಂದರೆ ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಡುತ್ತಿದ್ದಾರೆ. ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ಪರ ಕೊಹ್ಲಿ ಮತ್ತು ಪ್ರತಿಭಾನ್ವಿತ ಆಟಗಾರ ದೇವದತ್ ಪಡಿಕ್ಕಲ್ ಆರಂಭಿಕರಾಗಿ ಆಡೋದು ಬಹುತೇಕ ಖಚಿತ. ಬ್ರಾಡ್ ಹಾಗ್ ನೆಚ್ಚಿನ ಪ್ಲೇಯಿಂಗ್ XIನಲ್ಲೂ ಕೊಹ್ಲಿ-ಪಡಿಕ್ಕಲ್ ಆರಂಭಿಕರಾಗಿ ಹೆಸರಿಸಲ್ಪಟ್ಟಿದ್ದಾರೆ.
ಬೆಸ್ಟ್ ಮಿಡ್ಲ್ ಆರ್ಡರ್
ಮೊದಲ ಐಪಿಎಲ್ ಪಂದ್ಯಕ್ಕೆ ಹಾಗ್ ಹೆಸರಿಸಿರುವ ಪ್ಲೇಯಿಂಗ್ XIನಲ್ಲಿ ಮಿಸ್ಟರ್ 360 ಡಿಗ್ರೀ ಖ್ಯಾತಿಯ ಎಬಿ ಡಿ ವಿಲಿಯರ್ಸ್, ಸ್ಪೋಟಕ ಬ್ಯಾಟ್ಸ್ಮನ್ ಗಳಾದ ಗ್ಲೆನ್ ಮ್ಯಾಕ್ಸ್ವೆಲ್, ಡಾನ್ ಕ್ರಿಸ್ಚಿಯನ್ ಮತ್ತು ಮೊಹಮ್ಮದ್ ಅಜರುದ್ದೀನ್ ಕಾಣಿಸಿಕೊಂಡಿದ್ದಾರೆ. ಇದೇ ಪ್ರಕಾರ ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ಪ್ಲೇಯಿಂಗ್ XI ಇದ್ದರೆ ಇದು ನಿಜಕ್ಕೂ ಬಲಿಷ್ಠ ಮಿಡ್ಲ್ ಆರ್ಡರ್ ಬ್ಯಾಟಿಂಗ್ ಅನ್ನಿಸಿಕೊಳ್ಳಲಿದೆ.
ಹಾಗ್ ನೆಚ್ಚಿನ ಆರ್ಸಿಬಿ ತಂಡ
1. ದೇವದತ್ ಪಡಿಕ್ಕಲ್, 2. ವಿರಾಟ್ ಕೊಹ್ಲಿ (ಸಿ), 3. ಎಬಿ ಡಿವಿಲಿಯರ್ಸ್, 4. ಗ್ಲೆನ್ ಮ್ಯಾಕ್ಸ್ ವೆಲ್, 5. ಡಾನ್ ಕ್ರಿಶ್ಚಿಯನ್, 6. ಮೊಹಮ್ಮದ್ ಅಜರುದ್ದೀನ್, 7. ವಾಷಿಂಗ್ಟನ್ ಸುಂದರ್, 8. ಮೊಹಮ್ಮದ್ ಸಿರಾಜ್, 9. ನವದೀಪ್ ಸೈನಿ, 10 ಕೇನ್ ರಿಚರ್ಡ್ಸನ್, 11. ಯುಜುವೇಂದ್ರ ಚಾಹಲ್.
This News Article Is A Copy Of MYKHEL
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm