ಬ್ರೇಕಿಂಗ್ ನ್ಯೂಸ್
04-04-21 10:38 am Source: MYKHEL ಕ್ರೀಡೆ
ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm