ಬ್ರೇಕಿಂಗ್ ನ್ಯೂಸ್
04-04-21 10:38 am Source: MYKHEL ಕ್ರೀಡೆ
ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ದೇವದತ್ ಪಡಿಕ್ಕಲ್ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ. ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು.
ಕಳೆದ ಆವೃತ್ತಿಯಲ್ಲಿ ಆರ್ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ನಲ್ಲಿ ಕೊರೊನಾ ವೈರಸ್ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್ ಕೂಡ ಕೊರೊನಾ ವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.
This News Article Is A Copy Of MYKHEL
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 04:46 pm
Mangalore Correspondent
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm