ಬ್ರೇಕಿಂಗ್ ನ್ಯೂಸ್
05-04-21 12:49 pm source: MYKHEL ಕ್ರೀಡೆ
ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಸಿರಾಜ್, ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಸರಣಿಯ ವೇಳೆ ಅದ್ಭುತ ಪ್ರದರ್ಶನ ನೀಡಿದ್ದಕ್ಕಾಗಿ ಮಹೀಂದ್ರ ಅವರು ಸಿರಾಜ್ಗೂ ಸೇರಿ 6 ಪ್ರತಿಭಾನ್ವಿತ ಆಟಗಾರರಿಗೆ SUV ಜೀಪ್ ಉಡುಗೊರೆಯಾಗಿ ನೀಡಿದ್ದರು.
ಮಹೀಂದ್ರ ಥಾರ್, ನೂತನ SUV ಅನ್ನು ಆನಂದ್ ಮಹೀಂದ್ರ ಅವರು ಸಿರಾಜ್ಗೆ ಉಡುಗೊರೆಯಾಗಿ ನೀಡಿದ್ದರು. ಆದರೆ ಖುದ್ದಾಗಿ ತಾನೇ ಬಂದು ಗಿಫ್ಟ್ ಸ್ವೀಕರಿಸಲು ಮೊಹಮ್ಮದ್ ಸಿರಾಜ್ಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿರಾಜ್ ಸಹೋದರ ಮತ್ತು ತಾಯಿ ಹೈದರಾಬಾದ್ನ ಮಹೀಂದ್ರ ಶೋ ರೂಮ್ನಿಂದ ಗಿಫ್ಟ್ ಸ್ವೀಕರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಸಿರಾಜ್ ಸದ್ಯ ಚೆನ್ನೈಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಯೋ ಬಬಲ್ ಒಳಗಿರುವುದರಿಂದ ಅವರಿಗೆ ಖುದ್ದಾಗಿ ಬಂದು ಜೀಪ್ ಸ್ವೀಕರಿಸಲು ಸಾಧ್ಯವಾಗಿಲ್ಲ. ಆದರೆ ಮಹೀಂದ್ರಗೆ ಧನ್ಯವಾದ ಸಲ್ಲಿಸಿ ಸಿರಾಜ್ ಟ್ವೀಟ್ ಮಾಡಿದ್ದಾರೆ.
'ಈ ಕ್ಷಣದ ಖುಷಿ ವರ್ಣಿಸಲು ನನ್ನ ಪದಗಳು ಸೋಲುತ್ತಿವೆ. ನೀವು ನೀಡಿದ ಸೊಗಸಾದ ಥಾರ್ SUV ಗಿಫ್ಟ್ಗಾಗಿ ನಾನು ಏನೂ ಹೇಳಲು, ಮಾಡಲು ಆಗುತ್ತಿಲ್ಲ. ಆ ಭಾವನಗೆಗಳನ್ನು ವ್ಯಕ್ತಪಡಿಸಲು ಆಗುತ್ತಿಲ್ಲ. ಈ ಹೊತ್ತು ನಾನು ದೊಡ್ಡ ಧನ್ಯವಾದಗಳನ್ನಷ್ಟೇ ಹೇಳಬಲ್ಲೆ' ಎಂದು ಸಿರಾಜ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಏಪ್ರಿಲ್ 9ರಂದು ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ಆಡಲಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm