ಬ್ರೇಕಿಂಗ್ ನ್ಯೂಸ್
05-04-21 12:49 pm source: MYKHEL ಕ್ರೀಡೆ
ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಸಿರಾಜ್, ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸ ಸರಣಿಯ ವೇಳೆ ಅದ್ಭುತ ಪ್ರದರ್ಶನ ನೀಡಿದ್ದಕ್ಕಾಗಿ ಮಹೀಂದ್ರ ಅವರು ಸಿರಾಜ್ಗೂ ಸೇರಿ 6 ಪ್ರತಿಭಾನ್ವಿತ ಆಟಗಾರರಿಗೆ SUV ಜೀಪ್ ಉಡುಗೊರೆಯಾಗಿ ನೀಡಿದ್ದರು.
ಮಹೀಂದ್ರ ಥಾರ್, ನೂತನ SUV ಅನ್ನು ಆನಂದ್ ಮಹೀಂದ್ರ ಅವರು ಸಿರಾಜ್ಗೆ ಉಡುಗೊರೆಯಾಗಿ ನೀಡಿದ್ದರು. ಆದರೆ ಖುದ್ದಾಗಿ ತಾನೇ ಬಂದು ಗಿಫ್ಟ್ ಸ್ವೀಕರಿಸಲು ಮೊಹಮ್ಮದ್ ಸಿರಾಜ್ಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿರಾಜ್ ಸಹೋದರ ಮತ್ತು ತಾಯಿ ಹೈದರಾಬಾದ್ನ ಮಹೀಂದ್ರ ಶೋ ರೂಮ್ನಿಂದ ಗಿಫ್ಟ್ ಸ್ವೀಕರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಸಿರಾಜ್ ಸದ್ಯ ಚೆನ್ನೈಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಬಯೋ ಬಬಲ್ ಒಳಗಿರುವುದರಿಂದ ಅವರಿಗೆ ಖುದ್ದಾಗಿ ಬಂದು ಜೀಪ್ ಸ್ವೀಕರಿಸಲು ಸಾಧ್ಯವಾಗಿಲ್ಲ. ಆದರೆ ಮಹೀಂದ್ರಗೆ ಧನ್ಯವಾದ ಸಲ್ಲಿಸಿ ಸಿರಾಜ್ ಟ್ವೀಟ್ ಮಾಡಿದ್ದಾರೆ.
'ಈ ಕ್ಷಣದ ಖುಷಿ ವರ್ಣಿಸಲು ನನ್ನ ಪದಗಳು ಸೋಲುತ್ತಿವೆ. ನೀವು ನೀಡಿದ ಸೊಗಸಾದ ಥಾರ್ SUV ಗಿಫ್ಟ್ಗಾಗಿ ನಾನು ಏನೂ ಹೇಳಲು, ಮಾಡಲು ಆಗುತ್ತಿಲ್ಲ. ಆ ಭಾವನಗೆಗಳನ್ನು ವ್ಯಕ್ತಪಡಿಸಲು ಆಗುತ್ತಿಲ್ಲ. ಈ ಹೊತ್ತು ನಾನು ದೊಡ್ಡ ಧನ್ಯವಾದಗಳನ್ನಷ್ಟೇ ಹೇಳಬಲ್ಲೆ' ಎಂದು ಸಿರಾಜ್ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ. ಏಪ್ರಿಲ್ 9ರಂದು ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ಆಡಲಿವೆ.
This News Article Is A Copy Of MYKHEL
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm